ಸ್ಪಂದನ ಸಂಜೀವಿನಿ ಒಕ್ಕೂಟ ಸದಸ್ಯರಿಂದ ಗದ್ದೆ ನಾಟಿ

ಕುಂದಾಪುರ:ಜಿಲ್ಲಾ ಪಂಚಾಯತ್ ಉಡುಪಿ,ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ,ಕೃಷಿ ಇಲಾಖೆ ಉಡುಪಿ ಜಿಲ್ಲೆ,ತಾಲೂಕು ಪಂಚಾಯತ್ ಕುಂದಾಪುರ,ಗ್ರಾಮ ಪಂಚಾಯತ್ ಹಂಗಳೂರು ಅವರ ಸಂಯುಕ್ತ ಆಶ್ರಯದಲ್ಲಿ ನಡೆದ ಹಡಿಲು ಭೂಮಿಗೆ ಮರುಜೀವ ನೀಡುವ ಕಾರ್ಯಕ್ರಮದ ಅಂಗವಾಗಿ ನಿರ್ಜೀವ ಸ್ಥಿತಿಯಲ್ಲಿದ್ದ ಭೂಮಿಯಲ್ಲಿ ಸ್ಪಂದನ ಸಂಜೀವಿನಿ ಒಕ್ಕೂಟದ ಮಹಿಳಾ ಸದಸ್ಯರಿಂದ ಗದ್ದೆ ನಾಟಿ ಕಾರ್ಯ ನಡೆಯಿತು. ಸಂಜೀವಿನಿ ಸಂಘಗಳ ತಾಲೂಕು ಒಕ್ಕೂಟ ಅಧ್ಯಕ್ಷ ವಿಜಯ ಗಾಣಿಗ ಮಾತನಾಡಿ,ಹಡಿಲು ಭೂಮಿಗಳಿಗೆ ಮರುಜೀವ ನೀಡುವ ನಿಟ್ಟಿನಲ್ಲಿ ಕೈಗೊಳ್ಳುತ್ತಿರುವ ಕೆಲಸ ಕಾರ್ಯಗಳು ಶ್ಲಾಘನೀಯವಾದದು ಕೃಷಿ ಕ್ಷೇತ್ರದ ಬಗ್ಗೆ ಮಹಿಳೆಯರಿಗೆ […]

ಭೀಕರ ಬಿರುಗಾಳಿಗೆ,74ನೇ ಉಳ್ಳೂರು ಗ್ರಾಮದಲ್ಲಿ ಹಾನಿ

ಕುಂದಾಪುರ:74ನೇ ಉಳ್ಳೂರು ಗ್ರಾಮದಲ್ಲಿ ಬುಧವಾರ ಬೆಳಗಿನ ಜಾವ ಇದ್ದಕ್ಕಿದ್ದಂತೆ ಬಿಸಿದ ಭೀಕರ ಸುಂಟರಗಾಳಿಗೆ ಮನೆ ಹಾಗೂ ಅಡಿಕೆ,ತೆಂಗಿನ ತೋಟಕ್ಕೆ ಹಾನಿ ಆಗಿ ನೂರಾರು ಮರಗಳು ಬುಡ ಸಮೇತ ಧರೆಗೆ ಉರುಳಿ ಬಿದ್ದು ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಭೀಕರ ಬಿರುಗಾಳಿಯಿಂದ ಹಾನಿಗೊಳಗಾದ 74ನೇ ಉಳ್ಳೂರು ಗ್ರಾಮಕ್ಕೆ ಬೈಂದೂರು ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬೆಳೆ ಹಾನಿಯ ಬಗ್ಗೆ ಶೀಘ್ರವಾಗಿ ಸ್ಥಳಕ್ಕೆ ಭೇಟಿನೀಡಿ ಪರಿಹಾರ ಬಿಡುಗಡೆ ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಈ ಸಂದರ್ಭದಲ್ಲಿ […]

ಕಡಲ್ಕೊರೆತ ಪ್ರದೇಶಕ್ಕೆ ಸಿ.ಎಂ ಸಿದ್ದರಾಮಯ್ಯ ಭೇಟಿ,ಪರಿಶೀಲನೆ

ಮಂಗಳೂರು-ಭೀಕರ ಕಡಲ್ಕೊರೆತ ಉಂಟಾಗಿ ಹಾನಿ ಸಂಭವಿಸಿದ ದ.ಕ ಜಿಲ್ಲೆಯ ಉಳ್ಳಾಲ ತಾಲೂಕಿನ ಬಟ್ಟಪಾಡಿಯ ಕಡಲ್ಕೊರೆತ ಹಾನಿ ಪ್ರದೇಶಕ್ಕೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ,ಪರಿಸ್ಥಿತಿಯನ್ನು ಪರಿಶೀಲಿಸಿ,ಸ್ಥಳೀಯರೊಂದಿಗೆ‌ ಮಾತನಾಡಿದರು. ಈ ಸಂದರ್ಭದಲ್ಲಿ ರಾಜ್ಯ ವಿಧಾನಸಭೆಯ ಸ್ವೀಕರ್ ಯು.ಟಿ. ಖಾದರ್,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್,ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ. ಅತೀಕ್, ಜಿಲ್ಲಾಧಿಕಾರಿ ಮುಲ್ಲೈ ‌ಮುಗಿಲನ್ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಮುಖಂಡರು, ಸಂತ್ರಸ್ತರು ಉಪಸ್ಥಿತರಿದ್ದರು.

You cannot copy content of this page