ವಿದ್ಯಾರ್ಥಿಯನಿಬ್ಬರು ಸಮುದ್ರ ಪಾಲು,ಓರ್ವಳು ಮೃತ್ಯು,ಇನೋರ್ವಳ ರಕ್ಷಣೆ

ಉಡುಪಿ:ಮಡಿಕೇರಿ ಮೂಲದ ವಿದ್ಯಾರ್ಥಿನಿಯರಾದ ಮಾನ್ಯ (16),ಯಶಸ್ವಿನಿ (16) ಎನ್ನುವ ಗೆಳತಿಯರಿಬ್ಬರೂ ಮಲ್ಪೆ ಸಮುದ್ರ ತೀರದಲ್ಲಿ ಆಟವಾಡುತ್ತಿದ್ದಾಗ ಅಲೆಯ ರಭಸಕ್ಕೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದ ಪರಿಣಾಮ ಮಾನ್ಯ ಎನ್ನುವ ವಿದ್ಯಾರ್ಥಿನಿ ಮೃತರಾಗಿದ್ದಾರೆ,ಆಕೆಯ ಸ್ನೇಹಿತೆ ಯಶಸ್ವಿನಿಯನ್ನು ರಕ್ಷಿಸಿದ ಘಟನೆ ನಡೆದಿದೆ.ಸಮುದ್ರ ತೀರದಲ್ಲಿ ಆಟವಾಡುತ್ತಿದ್ದ ಸಂದರ್ಭ ನೀರಿನ ಸೆಳೆತಕ್ಕೆ ವಿದ್ಯಾರ್ಥಿಯನಿಬ್ಬರೂ ಕೊಚ್ಚಿಕೊಂಡು ಹೋಗಿದ್ದರು ಎನ್ನಲಾಗಿದೆ.ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ರಕ್ಷಿಸಿ ತೀರಕ್ಕೆ ತಂದಿದ್ದಾರೆ.ಈ ಪೈಕಿ ತೀವೃವಾಗಿ ಅಸ್ವಸ್ಥಗೊಂಡಿದ್ದ ಮಾನ್ಯ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ.ಯಶಸ್ವಿನಿ ಅವರನ್ನು […]

ದುಷ್ಟಶಕ್ತಿಗಳಿಂದ ರಕ್ಷಣೆ ಪಡೆಯಲು ಮಾರ್ಗದರ್ಶನ ಅಗತ್ಯ

ಕುಂದಾಪುರ:ಸಮಾಜದಲ್ಲಿ ಅಡಗಿರುವ ದುಷ್ಟಶಕ್ತಿಗಳಿಂದ ರಕ್ಷಣೆ ಪಡೆಯಲು ಹೆಣ್ಣು ಮಕ್ಕಳಿಗೆ ಮಾರ್ಗದರ್ಶನ,ತಿಳುವಳಿಕೆ ಹೆಚ್ಚು ಹೆಚ್ಚು ನೀಡುವ ಪ್ರಯತ್ನವನ್ನು ಸ್ವಸ್ಥ ಸಮಾಜ ಮಾಡಬೇಕೆಂದು ಸೇವಾ ಸಂಗಮ ಟ್ರಸ್ಟ್‍ನ ಅಧ್ಯಕ್ಷ ಸುಬ್ರಹ್ಮಣ್ಯ ಹೊಳ್ಳ ಹೇಳಿದರು.ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ಆಶ್ರಯದಲ್ಲಿ ಗಂಗೊಳ್ಳಿ ಎಸ್.ವಿ.ಪದವಿಪೂರ್ವ ಕಾಲೇಜಿನ ರೋಟರಿ ಒಳಾಂಗಣದಲ್ಲಿ ಭಾನುವಾರ ನಡೆದ ಕಿಶೋರಿ ಜಾಗೃತಿ ಶಿಬಿರದಲ್ಲಿ ಅವರು ಮಾತನಾಡಿದರು.ಶಿಶು ಮಂದಿರದ ಅಧ್ಯಕ್ಷ ಬಿ.ರಾಘವೇಂದ್ರ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಉಷಾ ಪಿ.ಮಡಿವಾಳ ಉದ್ಘಾಟಿಸಿದರು,ರಾಮಪ್ರಸಾದ್ ಹರಿಹರಪುರ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.ಶಶಿಕಲಾ,ಶಿಶು ಮಂದಿರದ ಸಂಚಾಲಕ ಡಾ.ಕಾಶೀನಾಥ […]

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಪ್ರಮೋದ್ ಮಧ್ವರಾಜ್ ಇಂಗಿತ-ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಮೇಲೆ ದೃಷ್ಟಿ

ಉಡುಪಿ:ಸಾಮಾಜಿಕ ನ್ಯಾಯದ ಅಡಿಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತಾನು ಉತ್ಸುಕನಾಗಿದ್ದೇನೆ ಎಂದು ಬಿಜೆಪಿ ಪಕ್ಷದ ಮುಖಂಡ ಪ್ರಮೋದ್ ಮಧ್ವರಾಜ್ ಅವರು ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.ಬ್ರಹ್ಮವಾರ ತಾಲೂಕಿನ ಅಮ್ಮುಂಜೆಯ ತಮ್ಮ ನಿವಾಸದಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾಧ್ಯಮದವರನ್ನು ಉದ್ದೆಶೀಸಿ ಮಾತನಾಡಿದ ಅವರು ಪಕ್ಷವೂ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಅವಕಾಶವನ್ನು ನೀಡಲಿದೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಮೇಲೆ ಕಣ್ಣನ್ನು ಇಟ್ಟಿರುವ ಅವರು, ಪಕ್ಷದ ವತಿಯಿಂದ ಟಿಕೆಟ್ ನೀಡಿದ್ದಲ್ಲಿ ಎಲ್ಲರ ಆರ್ಶೀವಾದ ಪಡೆದು ಮತದಾರರ ಸಹಕಾರದಿಂದ ಎಲೆಕ್ಷನ್ ಎದುರಿಸಲು ಸಿದ್ದನಿದ್ದೇನೆ ಎಂದು […]

You cannot copy content of this page