ಬಿಜೆಪಿ ಪಕ್ಷದ ವಿಶೇಷ ಕಾರ್ಯಕಾರಿಣಿ ಸಭೆ
ಕುಂದಾಪುರ:ಸರಕಾರದ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಸಿಗದೆ ಇರುವುದರಿಂದ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ರಾಜ್ಯ ಸರಕಾರದ ವಿರುದ್ಧ ಅಸಮಾಧಾನವನ್ನು ವ್ಯಕ್ತಪಡಿಸಿದರು.ತ್ರಾಸಿ ಕೊಂಕಣ ಖಾರ್ವಿ ಸಭಾಭವನದಲ್ಲಿ ಬುಧವಾರ ನಡೆದ ಬಿಜೆಪಿ ಪಕ್ಷದ ಬೈಂದೂರು ಮಂಡಲ ಅದರ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸಭೆ ಅಧ್ಯಕ್ಷತೆಯನ್ನು ವಹಿಸಿದ್ದ ಬಿಜೆಪಿ ಬೈಂದೂರು ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮಾತನಾಡಿ,ಮುಂದಿನ ಮೂರು ತಿಂಗಳುಗಳ ಅವಧಿಯಲ್ಲಿ ಪಕ್ಷದ […]