ಬೆಲೆ ಬಾಳುವ ರಕ್ತಚಂದನ ಮರದ ತುಂಡುಗಳು ಸಹಿತ‌,ಆರೋಪಿಗಳು ವಶಕ್ಕೆ

ಮಂಗಳೂರು:ವೇಣೂರು ವಲಯಾರಣ್ಯಧಿಕಾರಿ ನೇತೃತ್ವದ ತಂಡವು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 125 ಕೆ.ಜಿ ರಕ್ತ ಚಂದನವನ್ನು ದಾಳಿ ಮಾಡಿ ವಶಕ್ಕೆ ಪಡೆದಿದ್ದ ಘಟನೆ ವೇಣೂರು ಕರಿಮಣೇಲು ಎಂಬಲ್ಲಿ ನಡೆದಿದೆ.ಆರೋಪಿಗಳಾದ ಬಂಟ್ವಾಳ ಮಾವಿನಕಟ್ಟೆ ನಿವಾಸಿ ಖಾಲಿದ್ ಹಾಗೂ ಗುರುವಾಯನಕೆರೆ ನಿವಾಸಿ ದೀಕ್ಷಿತ್ ಅವರನ್ನು ಬಂಧಿಸಲಾಗಿದೆ.ಆರೋಪಿಗಳು ವೇಣೂರು ಕರಿಮಣೇಲು ಎಂಬಲ್ಲಿಂದ ಅಕ್ರಮವಾಗಿ ರಕ್ತಚಂದನ ಸಾಗಾಟ ಮಾಡುತ್ತಿದ್ದರು.ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವಲಯಾರಣ್ಯಧಿಕಾರಿ ಮಹೀಮ್ ಜನ್ನು ನೇತೃತ್ವದ ತಂಡ ಆರೋಪಿಗಳು ಸಹಿತ 125 ಕೆ.ಜಿ. ರಕ್ತಚಂದನ ಮತ್ತು ಸಾಗಾಟಕ್ಕೆ ಬಳಸಿದ ವಾಹನ […]

ಸೈಕಲ್‍ನಲ್ಲಿ ದೇಶಾದ್ಯಂತ ಸುತ್ತಿ ಡ್ರಗ್ಸ್ ಜಾಗೃತಿ ಅಭಿಯಾನ

ಕುಂದಾಪುರ:ಗಾಂಜಾ,ಡ್ರಗ್ಸ್‍ನಂತಹ ಮಾದಕ ವಸ್ತುಗಳಿಗೆ ಯುವಕರು ಬಲಿ ಆಗುತ್ತಿರುವ ಹಿನ್ನೆಲೆಯಲ್ಲಿ ಜನ ಜಾಗೃತಿಯನ್ನು ಮೂಡಿಸುವ ಸಲುವಾಗಿ ಛತ್ತೀಸ್‍ಗಢ ರಾಯಭಾಗ್ ಮೂಲದ ನಿವಾಸಿ ನೇಮ್ ಕುಮಾರ್ ಎನ್ನುವ ಯುವಕ ಸೈಕಲ್‍ನಲ್ಲೆ ದೇಶಾದ್ಯಂತ ಸುತ್ತಿ ಮಾದಕ ವಸ್ತುಗಳ ವಿರುದ್ಧ ಅಭಿಯಾನವನ್ನು ಕೈಗೊಂಡಿದ್ದಾರೆ.ಕಳೆದ 75 ದಿನಗಳ ಹಿಂದೆ ಛತ್ತೀಸ್‍ಗಢ ರಾಯಭಾಗ್‍ನಿಂದ ಸೈಕಲ್ ಮೂಲಕ ತೆರಳಿದ್ದ ನೇಮ್ ಕುಮಾರ್ ರಾಷ್ಟ್ರೀಯ ಹೆದ್ದಾರಿ ಮೂಲಕ ಸಾಗಿ ಬಂದಿದ್ದ ಅವರು ಬುಧವಾರ ಕುಂದಾಪುರ ತಾಲೂಕನ್ನು ಪ್ರವೇಶ ಮಾಡಿದ್ದಾರೆ.ಈ ಸೈಕಲ್ ಅಭಿಯಾನ ಒಂದು ವರ್ಷಗಳ ಕಾಲ ಮುಂದುವರೆಯಲಿದ್ದು ದೇಶಾದ್ಯಂತ […]

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಐಎಎಸ್,ಕೆಎಎಸ್ ಅಧಿಕಾರಿಗಳು ಕಣ್ಣು ಮತ್ತು ಕಿವಿಗಳಿದ್ದಂತೆ-ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು:ಪ್ರತಿಯೊಬ್ಬ ಅಧಿಕಾರಿ ಸಂವಿಧಾನದ ಚೌಕಟ್ಟಿನೊಳಗೆ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ಕಾರ್ಯನಿರ್ವಹಿಸಬೇಕು. ವಿದ್ಯಾವಂತರಾದ ಅಧಿಕಾರಿಗಳು,ವೈಜ್ಞಾನಿಕ ಹಾಗೂ ವೈಚಾರಿಕ ಚಿಂತನೆಯನ್ನು ಕರ್ತವ್ಯ ನಿರ್ವಹಿಸುವ ಮೂಲಕ ಜಾತ್ಯಾತೀತ ಹಾಗೂ ಸಮಾನ ಸಮಾಜವನ್ನು ನಿರ್ಮಿಸಬಹುದಾಗಿದೆ. ಸರ್ಕಾರದ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುವ ಶಪಥವನ್ನು ಅಧಿಕಾರಿಗಳು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರೊಂದಿಗೆ ಕೆ.ಎ.ಎಸ್. ಅಧಿಕಾರಿಗಳ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಾಜಕಾರಣಿಗಳು ಕಾನೂನು ಹಾಗೂ ನೀತಿಗಳನ್ನು ನಿರೂಪಿಸಿದರೆ,ಅವುಗಳನ್ನು ಜಾರಿಗೊಳಿಸುವುದು ಅಧಿಕಾರಿಗಳು.ಜನರು ಮತ್ತು ಅಧಿಕಾರಿಗಳು ಸರ್ಕಾರದ […]

You cannot copy content of this page