ಕೊಡೇರಿಯಲ್ಲಿ ದೋಣಿ ದುರಂತ,9 ಮೀನುಗಾರರು ಪಾರು

ಬೈಂದೂರು:ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಡೇರಿ ಬಂದರಿನ ಸುಮಾರು ಐದು ನಾಟಿಕಲ್ ದೂರದಲ್ಲಿ ಮೀನುಗಾರಿಕೆ ಮಾಡುತ್ತಿದ್ದ ನಾಡದೋಣಿಯೊಂದು ಸಮುದ್ರ ಅಲೆಯ ಹೊಡೆತಕ್ಕೆ ಸಿಲುಕಿ ಪಲ್ಟಿಯಾಗಿದ್ದು,ದೋಣಿಯಲ್ಲಿದ್ದ 9 ಜನ ಮೀನುಗಾರರು ಪಾರಾಗಿದ್ದಾರೆ.ಬಲೆ,ದೋಣಿಯಲ್ಲಿನ ಇಂಜಿನ್‍ಗೆ ಹಾನಿಯಾಗಿದೆ.ಅಂದಾಜು 2.ಲಕ್ಷ.ರೂ ನಷ್ಟ ಉಂಟಾಗಿದ್ದ ಘಟನೆ ಶುಕ್ರವಾರ ನಡೆದಿದೆ.ಉಪ್ಪುಂದ ಗ್ರಾಮದ ಪಾಳ್ಯದರ ತೋಪ್ಲು ಪುರ್ಶುಯ್ಯನ ಪುಂಡಲೀಕ ಎನ್ನುವವರ ಮಾಲಿಕತ್ವದ ಶ್ರೀದುರ್ಗಾಪರಮೇಶ್ವರಿ ಎನ್ನುವ ದೋಣಿಯಲ್ಲಿ ಶುಕ್ರವಾರ 9 ಜನ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು.ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿದ್ದ ಸಂದರ್ಭ ಅಲೆಯ ಹೊಡೆತಕ್ಕೆ ಸಿಲುಕಿದ ದೋಣಿ ಪಲ್ಟಿ ಹೊಡೆದು […]

ಮರವಂತೆ ಸಿಆರ್ ಝಡ್ ಕ್ಲಿಯರೆನ್ಸ್ ಗೆ ಸಂಸದ ಬಿ.ವೈ ರಾಘವೇಂದ್ರ ಕೇಂದ್ರ ಸಚಿವರಿಗೆ ಮನವಿ

ಕುಂದಾಪುರ:ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಬೈಂದೂರು ತಾಲೂಕಿನ ಮರವಂತೆ ಹೊರ ಬಂದರಿನ ಎರಡನೇ ಹಂತದ ಕಾಮಗಾರಿ ಕೆಲಸಕ್ಕೆ ಈಗಾಗಲೇ 85 ಕೋಟಿ.ರೂ ಮಂಜೂರಾಗಿದ್ದು ಬಂದರಿನ ಕಾಮಗಾರಿ ಕೆಲಸ ಆದಷ್ಟು ಬೇಗ ಆರಂಭಿಸಲು ಸಿಆರ್ ಝಡ್ ಕ್ಲಿಯರೆನ್ಸ್ ನೀಡುವಂತೆ ಸಂಸದ ಬಿ.ವೈ.ರಾಘವೇಂದ್ರ ಅವರು ಕೆಂದ್ರ ಬಂದರು ಮತ್ತು ಮೀನುಗಾರಿಕೆ ಸಚಿವರಾದ ಸರ್ಬಾನಂದ್ ಸೋನುವಾಲ್ ಅವರನ್ನು ದೆಹಲಿಯಲ್ಲಿ ಭೇಟಿಮಾಡಿ ಮನವಿಯನ್ನು ಮಾಡಿದ್ದಾರೆ. ಇತ್ತೀಚಿಗೆ ಬೈಂದೂರು ತಾಲೂಕಿನ ಉಪ್ಪುಂದ ಕರ್ಕಿಕಳಿ ಎಂಬಲ್ಲಿ ಸಂಭವಿಸಿದ ದೋಣಿ ದುರಂತದಲ್ಲಿ ಇಬ್ಬರು ಮೀನುಗಾರರು ಮೃತಪಟ್ಟ ವಿಷಯವನ್ನು […]

ನೂತನ ಶಾಸಕರಿಗೆ ಮಾಹಿತಿ ಕಾರ್ಯಾಗಾರ

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ಹಾಗೂ ಬೈಂದೂರು ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಶಾಸಕರಿಗೆ ವಿವಿಧ ಇಲಾಖೆಗಳ ವಿವರ ನೀಡುವ ನಿಟ್ಟಿನಲ್ಲಿ ಕುಂದಾಪುರ ತಾ.ಪಂ ಸಭಾಂಗಣದಲ್ಲಿ ಮಾಹಿತಿ ಕಾರ್ಯಾಗಾರ ಗುರುವಾರ ನಡೆಯಿತು.ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಮತ್ತು ಬೈಂದೂರು ವಿಧಾನ ಸಭಾ ಕ್ಷೇತ್ರ ಶಾಸಕರಾದ ಗುರುರಾಜ್ ಗಂಟಿಹೊಳೆ ಸಭೆಯಲ್ಲಿ ಭಾಗವಹಿಸಿ ಅಧಿಕಾರಿಗಳಿಂದ ವಿವಿಧ ಇಲಾಖೆಗಳ ಮಾಹಿತಿ ಪಡೆದು ಕೊಂಡರು,ಸಮಸ್ಯೆಗಳ ಕುರಿತು ಚರ್ಚಿಸಿದರು.ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್ ಮಾಹಿತಿಯನ್ನು ನೀಡಿದರು.ಜಿ.ಪಂ […]

You cannot copy content of this page