ಯೋಗಾಚಾರ್ಯ ಸಂತೋಷಗೆ ವಿಶ್ವಮಾನ್ಯ ಯೋಗರತ್ನ ಪ್ರಶಸ್ತಿ

ಕುಂದಾಪುರ:ದೇಶ ವಿದೇಶಗಳಲ್ಲಿ ಯೋಗದ ಕಂಪನ್ನು ಬೀರಿ ಜನಜನಿತರಾಗಿರುವ ಕುಂದಾಪುರ ತಾಲೂಕಿನ ಕುಂದಬಾರಂದಾಡಿ ಗ್ರಾಮದ ಕೊಳುರು ನಿವಾಸಿ ಯೋಗಾಚಾರ್ಯ ಸಂತೋಷ್ ಗೂರೂಜಿ ಅವರು ಯೋಗಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಬ್ರಹ್ಮೀಭೂತ ಶ್ರೀ ವಾಸುದೇವ ಮಹಾರಾಜ್ ಫೌಂಡೇಷನ್ ವತಿಯಿಂದ ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ವಿಶ್ವಮಾನ್ಯ ಯೋಗರತ್ನ ಪ್ರಶಸ್ತಿ-2023 ನೀಡಿ ಗೌರವಿಸಲಾಯಿತು.

ಕರಾಟೆ ತರಗತಿ ಉದ್ಘಾಟನೆ

ಕುಂದಾಪುರ:ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂಜಾಡಿ-2 ಬಗ್ವಾಡಿ ಯಲ್ಲಿ ಕರಾಟೆ ತರಗತಿ ಉದ್ಘಾಟನಾ ಕಾರ್ಯಕ್ರಮ ಸೋಮವಾರ ನಡೆಯಿತು. ಶಾಲೆಯ ಮುಖ್ಯೋಪಾಧ್ಯಾಯಿನಿ ಶೈಲಜಾ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿದಸಿದ್ದರು.ಸಂದೀಪ್ ಕುಂದಾಪುರ ಉದ್ಘಾಟಿಸಿದರು. ಕರಾಟೆ ಗುರುಗಳಾದ ನಟರಾಜ್,ಶಿಕ್ಷಕವೃಂದವರು ಉಪಸ್ಥಿತರಿದ್ದರು.ಶಿಕ್ಷಕಿ ಸತ್ಯವತಿ ಸ್ವಾಗತಿಸಿದರು.ಜಯಂತಿ ನಿರೂಪಿಸಿದರು.ಶ್ವೇತಾ ಮತ್ತು ಹರ್ಷಿತ ಸಹಕರಿಸಿದರು.ಸ್ವಾತಿ ವಂದಿಸಿದರು.

ಗಂಗೊಳ್ಳಿ ಠಾಣೆ ಉಪನೀರಿಕ್ಷಕರಾಗಿ ಹರೀಶ್ ಆರ್ ಅಧಿಕಾರ ಸ್ವೀಕಾರ

ಕುಂದಾಪುರ:ಗಂಗೊಳ್ಳಿ ಪೆÇಲೀಸ್ ಠಾಣೆಯ ಉಪನಿರೀಕ್ಷಕರಾಗಿ ಹರೀಶ ಆರ್ ಸೋಮವಾರ ಅಧಿಕಾರ ಸ್ವೀಕರಿಸಿದರು.ಗಂಗೊಳ್ಳಿ ಪೆÇಲೀಸ್ ಠಾಣೆಯ ಉಪನಿರೀಕ್ಷಕರಾಗಿದ್ದ ವಿನಯ್ ಎಂ ಕೊರ್ಲಹಳ್ಳಿ ಅವರು ಕುಂದಾಪುರ ಪೆÇಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ.ಕಂಡ್ಲೂರು ಸಂಚಾರ ಠಾಣೆಯಲ್ಲಿ ಉಪನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಹರೀಶ್ ಆರ್. ಅವರನ್ನು ಗಂಗೊಳ್ಳಿ ಪೆÇಲೀಸ್ ಠಾಣೆಯ ಉಪನಿರೀಕ್ಷಕರಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿತ್ತು

You cannot copy content of this page