ನೀಲಾವರದಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

ಉಡುಪಿ:ನೀಲಾವರದಲ್ಲಿ ಮನೆಗೆ ಸಿಡಿಲು ಬಡಿದ ಪರಿಣಾಮ ಮನೆಯಲ್ಲಿನ ಎಲೆಕ್ಟ್ರಾನಿಕ್ ಉಪಕರಣಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿ ಹೋಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.ಸಿಡಿಲಿನ ಹೊಡೆತಕ್ಕೆ ಮನೆ ಗೋಡೆ ಬಿರುಕು ಬಿಟ್ಟಿದೆ.ಮೀಟರ್ ಬೋರ್ಡ್ ಕೆಳಗೆ ಕಳಚಿ ಬಿದ್ದಿದೆ.

ಮಂಗಳೂರಿನಲ್ಲಿ ಭಾರಿ ಮಳೆ,ಕೃತಕ ನೆರೆ ಸೃಷ್ಟಿ,ವ್ಯಾಪಕ ಹಾನಿ‌

ಮಂಗಳೂರು:ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯಲ್ಲಿ ಸೋಮವಾರ ಭಾರಿ ಮಳೆಯಾಗಿದೆ.ಹವಾಮಾನ ವೈಪರಿತ್ಯ ದಿಂದಾಗಿ ಏಕಾಏಕಿ ಸುರಿದ ವರುಣನ ಅಬ್ಬರಕ್ಕೆ ಜಿಲ್ಲೆಯ ಜನತೆ ತತ್ತರಿಸುವಂತಾಗಿದೆ. ಗುಡುಗು,ಸಿಡಿಲು ಸಹಿತ ಮಳೆ ಧಾರಾಕಾರವಾಗಿ ಸುರಿದಿದ್ದು, ಕೆಲವೆಡೆ ವಿದ್ಯುತ್ ವ್ಯತ್ಯಯವಾಗಿತ್ತು.ಗಾಳಿಮಳೆಗೆ ಹಲವು ಮರಗಳು ಧರೆಗುರುಳಿವೆ.ಮಳೆಯ ಅಬ್ಬರ ಜೋರಿರುವುದರಿಂದ ಡಿ. 3 ರಂದು ಜಿಲ್ಲೆಯಲ್ಲಿ ಶಾಲಾ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮ ವಹಿಸುವಂತೆ ಜಿಲ್ಲಾಡಳಿತಸೂಚಿಸಿದೆ.ಟಿಪ್ಪು ಸುರತ್ಕಲ್ ಮಾರುಕಟ್ಟೆ ಬಳಿಯ ವೀನಸ್ ಅಸ್ಪತ್ರೆಗೆ ಪ್ರವೇಶಿಸಿದ‌ ನೆರೆ ನೀರಿನಿಂದಾಗಿ,ರೋಗಿಗಳ ಪರದಾಟ ಮಾಡುವಂತ್ತಾಯಿತು.

ಸಾಂಪ್ರದಾಯಿಕ ಶೈಲಿಯಲ್ಲಿ ತಿರಿ ನಿರ್ಮಾಣ,ಖುಷಿಯಲ್ಲಿ ಸಂಭ್ರಮಿಸಿದ ಕುಟುಂಬಿಕರು

ಕುಂದಾಪುರ: ಕೃಷಿಕರಾದ ನಾವುಂದ ಕಾರಂತರ ಹಿತ್ತಲು ಸೂರ ಪೂಜಾರಿಯವರ ಮನೆಯಲ್ಲಿ ಸಾಂಪ್ರದಾಯಿಕ ಶೈಲಿಯಲ್ಲಿ ಭತ್ತವನ್ನು ಶೇಕರಿಸಿಡುವ ಕುಂದಾಪುರದ ಆಡು ಭಾಷೆಯಲ್ಲಿ ಹೇಳುವಂತಹ ತಿರಿ ಯನ್ನು ತಯಾರಿಸಿದ್ದು ನೋಡುಗರ ಮನ ಸೆಳೆಯುವಂತೆ ಇದೆ.ಹುಲ್ಲಿನಿಂದ ಮಾಡಿದ ಹಗ್ಗ ಅಂದರೆ ಮಡಿ ಬಳ್ಳಿ ಮತ್ತು ಒಂದಷ್ಟು ಭತ್ತದ ಒಣಗಿದ ಹುಲ್ಲು ಇತ್ಯಾದಿಗಳಿಂದ ಸಾಂಪ್ರದಾಯಕ ಶೈಲಿಯಲ್ಲಿ ತಿರಿವೊಂದನ್ನು ಅತ್ಯಂತ ಸುಂದರ ಮತ್ತು ಚಂದವಾಗಿ ರಚಿಸಲಾಗಿದೆ.ಈ ಹಿಂದೆ ಕರಾವಳಿ ಭಾಗದಲ್ಲಿ ಪ್ರತಿ ರೈತರ ಮನೆಯ ಅಂಗಳದಲ್ಲಿ ಇಂತಹ ತಿರಿಯನ್ನು ರಚಿಸಲಾಗುತ್ತಿತ್ತು.ಬದಲಾದ ಕಾಲ ಮಾನದಲ್ಲಿ ಮರೆಯಾಗುತ್ತಿರುವ […]

You cannot copy content of this page