ಅನಾಹುತ ಅರಿವು ಕಾರ್ಯಾಗಾರ

ಕುಂದಾಪುರ:ತ್ರಾಸಿ-ಮರವಂತೆ ಬೀಚ್‍ನಲ್ಲಿ ಪೆÇಲೀಸ್ ಇಲಾಖೆ,ಬೀಚ್ ನಿರ್ವಹಣಾ ಸಮಿತಿ,ಕೆ.ಎನ್.ಡಿ ಸಿಬ್ಬಂದಿ ಮತ್ತು 24/7 ಹೆಲ್ಪ್‍ಲೈನ್ ಗಂಗೊಳ್ಳಿ ವತಿಯಿಂದ ಅನಾಹುತ ಅರಿವು ಕಾರ್ಯಾಗಾರ ನಡೆಯಿತು.ವಿಶ್ವ ಪ್ರಸಿದ್ಧ ತ್ರಾಸಿ-ಮರವಂತೆ ಬೀಚ್‍ನ ರಮಣೀಯ ದೃಶ್ಯವನ್ನು ನೋಡ ಬರುತ್ತಿರುವ ಪ್ರವಾಸಿಗರಿಗೆ ಕಡಲು ಪ್ರಕ್ಷುಬ್ಧಗೊಂಡಿರುವ ಹಿನ್ನೆಲೆಯಲ್ಲಿ ಕಡಲಿಗೆ ಇಳಿದು ಮೋಜು ಮಸ್ತಿಯಲ್ಲಿ ತೊಡಗಿಕೊಳ್ಳದಂತೆ ಅರಿವನ್ನು ಮೂಡಿಸಲಾಯಿತು.ಅನಾಹುತ ಅರಿವು ಕಾರ್ಯಕ್ರಮದಡಿಯಲ್ಲಿ ಕಳೆದ ಒಂದು ವಾರಗಳಿಂದ ನಿರಂತರವಾಗಿ ಅಭಿಯಾನದ ಪ್ರಯುಕ್ತ ಪ್ರವಾಸಿಗರಿಗೆ ಕಡಲಿಗೆ ಇಳಿದು ಅನಾಹುತ ಹೇಗೆ ಸಂಭವಿಸುತ್ತದೆ ಎನ್ನುವ ವಿಚಾರದ ಬಗ್ಗೆ ಹಾಗೂ ಮುನ್ನೆಚ್ಚರಿಕೆಯನ್ನು ವಹಿಸುವ ಕುರಿತು […]

ಭಾರಿ ಗಾಳಿಮಳೆಗೆ ದನದ ಕೊಟ್ಟಿಗೆ ನೆಲಸಮ

ಕುಂದಾಪುರ:ಭಾರಿ ಗಾಳಿಮಳೆಗೆ ಆಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹರ್ಕೂರು ಗ್ರಾಮದ ಗುಡ್ಡಿ ನಿವಾಸಿ ಲಕ್ಷ್ಮೀ ದೇವಾಡಿಗ ಅವರ ದನದ ಕೊಟ್ಟಿಗೆ ಗುರುವಾರ ನೆಲಕ್ಕೆ ಕುಸಿದು ಬಿದ್ದು ಸಂಪೂರ್ಣ ಹಾನಿ ಆಗಿದೆ.ಅಂದಾಜು 5.ಲಕ್ಷ.ರೂ ನಷ್ಟ ಸಂಭವಿಸಿದೆ.ಬೈಂದೂರು ಮತ್ತು ಕುಂದಾಪುರ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಪ್ರಕೃತಿ ವಿಕೋಪದಿಂದ ಸಂಭವಿಸುವ ಘಟನೆಗಳು ಮುಂದುವರೆದಿದ್ದು ನಿರಾಶ್ರಿತರರು ಸಂಕಷ್ಟಕ್ಕೆ ಸಿಲುಕಿದ್ದಾರೆ.ತುರ್ತು ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ.

ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಪದಗ್ರಹಣ ಸಮಾರಂಭ ಕಾರ್ಯಕ್ರಮ

ಕುಂದಾಪುರ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಅದರ 2023-24 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಕಾರ್ಯಕ್ರಮ ಹೋಟೆಲ್ ಜ್ಯುವೆಲ್ ಪಾರ್ಕ್ ಹೆಮ್ಮಾಡಿಯಲ್ಲಿ ನಡೆಯಿತು.ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ನಿರ್ಗಮಿತ ಅಧ್ಯಕ್ಷ ನಾಗೇಶ್ ಪೂಜಾರಿ ಪದಗ್ರಹಣ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಲಯನ್ ಪ್ರಾಂತೀಯ ಅಧ್ಯಕ್ಷ ಏಕನಾಥ ಬೋಳಾರ್,ಕಾರ್ಯದರ್ಶಿ ಬೋಜರಾಜ್ ಶೆಟ್ಟಿ,ವಲಯಾಧ್ಯಕ್ಷ ಜಗದೀಶ್ ಶೆಟ್ಟಿ ಕುದ್ರಕೋಡು,ಪದಗ್ರಹಣ ಅಧಿಕಾರಿ ಮಾಜಿ ಜಿಲ್ಲಾ ಗವರ್ನರ್ ವಿಶ್ವನಾಥ ಶೆಟ್ಟಿ ಪಿಎಂಜೆಎಫ್,ನಿಕಟಪೂರ್ವ ಕಾರ್ಯದರ್ಶಿ ಚಂದ್ರಶೇಖರ್ ಶೆಟ್ಟಿ ಮತ್ತು ಕೋಶಾಧಿಕಾರಿ ಸುರೇಶ್ ಹಕ್ಲಾಡಿ ಉಪಸ್ಥಿತರಿದ್ದರು.ಲಯನ್ಸ್ ಕ್ಲಬ್ಬಿನ ನೂತನ […]

You cannot copy content of this page