ಪಾಂಡುರಂಗ ಶೇಟ್ ಸೇನಾಪುರ

ಕುಂದಾಪುರ:ಕಾಳವಾರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಗಿ ಪ್ರಸ್ತುತ ಕರ್ತವ್ಯವನ್ನು ನಿರ್ವಹಿಸುತ್ತಿದ್ದ ಸೇನಾಪುರ ಗ್ರಾಮದ ನಿವಾಸಿ ಪಾಂಡುರಂಗ ಶೇಟ್ (58) ಅವರು ತೀವೃ ಅನಾರೋಗ್ಯ ಕಾರಣದಿಂದ ಮಣಿಪಾಲ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು.ಅವರಿಗೆ ಪತ್ನಿ,ಪುತ್ರ,ಪುತ್ರಿ ಇದ್ದಾರೆ.ನಾಡ ಗ್ರಾಮ ಪಂಚಾಯತ್‍ನಲ್ಲಿ ಗುಮಸ್ತರಾಗಿ ಸೇವೆ ಸಲ್ಲಿಸಿದ ಪಾಂಡುರಂಗ ಶೇಟ್,ಸೇವಾ ವೃತ್ತಿಯಲ್ಲಿ ಕಾರ್ಯದರ್ಶಿಯಾಗಿ ಭಡ್ತಿ ಹೊಂದಿದ ಅವರು ನಾವುಂದ,ಹಕ್ಲಾಡಿ,ನಾಡ,ಕರ್ಕುಂಜೆ,ಹೊಂಬಾಡಿ ಮಂಡಾಡಿ ಹಾಗೂ ಕಾಳಾವಾರ ಗ್ರಾಮ ಪಂಚಾಯತ್‍ನಲ್ಲಿ ಅಭಿವೃದ್ಧಿ ಅಧಿಕಾರಿ ಆಗಿ ಸೇವೆಯನ್ನು ಸಲ್ಲಿಸಿದ್ದರು.ಕುಂದಾಪುರ ಸಹಾಯಕ ಆಯುಕ್ತರಾದ ರಶ್ಮಿ ಎಸ್.ಆರ್,ತಹಶೀಲ್ದಾರ್ ಶೋಭಾಲಕ್ಷ್ಮೀ,ಬೈಂದೂರು ತಾಲೂಕು ಪಂಚಾಯತ್ […]

ಮಳೆ ಹಾನಿಯಿಂದ ಉಡುಪಿ ಜಿಲ್ಲೆಯಲ್ಲಿ 28 ಕೋಟಿ ನಷ್ಟ:ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ:ಜಿಲ್ಲೆಯಾದ್ಯಂತ ಮಳೆ‌ ಆರ್ಭಟದಿಂದ ಇದುವರೆಗೂ 9 ಮಂದಿ ಸಾವನ್ನಪ್ಪಿದ್ದು, ಸುಮಾರು 28 ಕೋಟಿ ಮೌಲ್ಯದ ಆಸ್ತಿ ನಷ್ಟ ಉಂಟಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣ ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ರಾಜ್ಯದ ಹವಾಮಾನ,ಮಳೆ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪರಿಶೀಲಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವೀಡಿಯೊ ಸಂವಾದದಲ್ಲಿ ಸಚಿವರು ಪಾಲ್ಗೊಂಡರು.ಬಳಿಕ ಮಾತನಾಡಿದ ಸಚಿವರು, […]

ನಿವೃತ್ತ ಶಿಕ್ಷಕ ಕರುಣಾಕರ ಶೆಟ್ಟಿಗೆ ಸನ್ಮಾನ

ಕುಂದಾಪುರ:ಬೈಂದೂರು ವಲಯದ ಪ್ರಾಥಮಿಕ ಶಿಕ್ಷಕರ ಸಂಘದ ಮಾಜಿ ಗೌರವಾಧ್ಯಕ್ಷರಾದ,ಶಿಕ್ಷಕ ವೃತ್ತಿಯಿಂದ ಇತ್ತೀಚೆಗೆ ಸೇವಾ ನಿವೃತ್ತಿ ಹೊಂದಿರುವ ಕರುಣಾಕರ ಶೆಟ್ಟಿ ಕೆರಾಡಿ ಅವರನ್ನು ಬೈಂದೂರು ವಲಯದ ಪ್ರಾಥಮಿಕ ಶಿಕ್ಷಕರ ಸಂಘದ ವತಿಯಿಂದ ಸನ್ಮಾನಿಸಲಾಯಿತು.ಈ ಸಂದರ್ಭ ಸಂಘದ ಕಾರ್ಯದರ್ಶಿ ಗಣಪತಿ ಹೋಬಳಿದಾರ್,ಉಪಾಧ್ಯಕ್ಷ ಸುನೀಲ್ ಶೆಟ್ಟಿ,ಖಜಾಂಚಿ ಅಚ್ಚುತ ಬಿಲ್ಲವ ಹಾಗೂ ಸಂಘದ ಪದಾಧಿಕಾರಿಗಳು,ಅನುದಾನಿತ ಶಾಲೆಯ ಶಿಕ್ಷಕರು,ನಿವೃತ್ತ ಶಿಕ್ಷಕರು ಉಪಸ್ಥಿತರಿದ್ದರು.

You cannot copy content of this page