ಹೆದ್ದಾರಿಗೆ ಬಂದ ನಾಗರ ಹಾವು,ಟಿಪ್ಪರ್‌ನೊಳಗೆ ನುಗ್ಗಿಆವಾಂತರ

ಉಡುಪಿ:ರಾಷ್ಟ್ರೀಯ ಹೆದ್ದಾರಿ 66ರ ಕೋತಲಕಟ್ಟೆ ಬಳಿ ಹೆದ್ದಾರಿಯನ್ನು ದಾಟುತ್ತಿದ್ದ ನಾಗರ ಹಾವೊಂದು ಪಾರ್ಕ್ ಮಾಡಿದ್ದ ಟಿಪ್ಪನೊಳಗೆ ಹೊಕ್ಕಿ ಆವಾಂತರ ಸೃಷ್ಟಿಸಿದ ಘಟನೆ ನಡೆದಿದೆ.ರಸ್ತೆಯನ್ನು ದಾಟುತ್ತಿದ್ದ ನಾಗರ ಹಾವು ವಾಹನಗಳ ಚಕ್ರದಡಿಗೆ ಸಿಲುಕದಂತೆ ರಕ್ಷಿಸುವ ನಿಟ್ಟಿನಲ್ಲಿ ಸ್ಥಳೀಯರು ಸುರಕ್ಷಿತ ಪ್ರದೇಶಕ್ಕೆ ತೆರಳಲು ದಾರಿ ಮಾಡಿಕೊಡುತ್ತಿದ್ದ ಸಂದರ್ಭ ಅದೇ ಮಾರ್ಗದಲ್ಲಿ ಬರುತ್ತಿದ್ದ ಟಿಪ್ಪರ್ ಚಾಲಕನೋರ್ವ,ಹಾವನ್ನು ರಕ್ಷಣೆ ಮಾಡುತ್ತಿರುವುದನ್ನು ವೀಕ್ಷಿಸಲು ತನ್ನಟಿಪ್ಪರನ್ನು ರಸ್ತೆ ಬದಿ ಪಾರ್ಕ್ ಮಾಡಿ ಬಂದಿದ್ದ.ಅಷ್ಟರಲ್ಲಿ ರಸ್ತೆ ದಾಟುತ್ತಿದ್ದ ಹಾವು ನೇರವಾಗಿ ಟಿಪ್ಪರ್ ಅಡಿಯಿಂದ ಮೇಲೇರಿ ಟಿಪ್ಪರ್ ಒಳಗೆ […]

ವಿದ್ಯಾರ್ಥಿಗಳಿಗೆ ಪುಸ್ತಕ,ಕಲಿಕಾ ಸಾಮಾಗ್ರಿ ವಿತರಣೆ

ಕುಂದಾಪುರ:ಗಂಗೊಳ್ಳಿ ರಥಬೀದಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪುಸ್ತಕ ವಿತರಣೆ ಮತ್ತು ಲೇಖನ ಸಾಮಾಗ್ರಿಗಳ ವಿತರಣಾ ಕಾರ್ಯಕ್ರಮ ಶಾಲೆಯ ಸಭಾಂಗಣದಲ್ಲಿ ಮಂಗಳವಾರ ನಡೆಯಿತು.ಎಸ್‍ಡಿಎಂಸಿ ಅಧ್ಯಕ್ಷ ರತ್ನಾಕರ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವಾನಂದ ಪೂಜಾರಿ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕ,ಬ್ಯಾಗ್ ಮತ್ತು ಲೇಖನ ಸಾಮಾಗ್ರಿಗಳನ್ನು ವಿತರಿಸಿ ಶುಭ ಹಾರೈಸಿದರು.ಗಂಗೊಳ್ಳಿ ಬಿಲ್ಲವ ಸಂಘದ ಅಧ್ಯಕ್ಷ ಗೋಪಾಲ ಪೂಜಾರಿ,ಶಾಲೆಯ ಮುಖ್ಯ ಶಿಕ್ಷಕಿ ಚಂದ್ರಕಲಾ,ಶಿಕ್ಷಕವೃಂದವರು ಉಪಸ್ಥಿತರಿದ್ದರು

ಆಲೂರಿಗೆ ಸರಕಾರಿ ಬಸ್ ಕಲ್ಪಿಸುವಂತೆ ವಿದ್ಯಾರ್ಥಿಗಳ ಆಗ್ರಹ

ಕುಂದಾಪುರ:ಆಲೂರು-ಕುಂದಾಪು ಮತ್ತು ಕೊಲ್ಲೂರು ಮಾರ್ಗದಲ್ಲಿ ಸರಕಾರಿ ಬಸ್ ಓಡಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಆಲೂರು ಗ್ರಾಮ ಪಂಚಾಯತ್ ಎದುರುಗಡೆ ಸ್ಥಳೀಯ ವಿದ್ಯಾರ್ಥಿಗಳು ಶನಿವಾರ ಬೃಹತ್ ಪ್ರತಿಭಟನೆ ನಡೆಸಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರು.ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು,ಪೋಷಕರು,ಗ್ರಾಮಸ್ಥರು ಉಪಸ್ಥಿತರಿದ್ದರು.ಮಕ್ಕಳು ಮತ್ತು ಮಹಿಳೆಯರ ಹಿತದೃಷ್ಟಿಯಿಂದ ಕಾಡಂಚಿನ ಪ್ರದೇಶವಾದ ಆಲೂರಿಗೆ ಸರಕಾರಿ ಬಸ್ ಓಡಿಸಲು ಕೂಡಲೆ ಕ್ರಮ ಜರುಗಿಸಬೇಕೆಂದು ಗ್ರಾಮಸ್ಥರು ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.

You cannot copy content of this page