ನಾಡ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸುವಂತೆ ಸಾರ್ವಜನಿಕರ ಆಗ್ರಹ

ಕುಂದಾಪುರ:ನಾಡ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿಗಳ ಕೊರತೆಯಿಂದ ಗ್ರಾಮೀಣ ಪ್ರದೇಶದ ಜನರಿಗೆ ತೊಂದರೆ ಆಗುತ್ತಿದ್ದು ಸರಕಾರಿ ಆಸ್ಪತ್ರೆಯಲ್ಲಿರುವ ಖಾಲಿ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.ನಾಡ,ಪಡುಕೋಣೆ,ಹಡವು,ಸೇನಾಪುರ ,ಬಡಾಕೆರೆ,ಮೊವಾಡಿ,ಹೆಮ್ಮುಂಜೆ ಭಾಗದ ಜನರು ನಾಡ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಅವಲಂಬಿಸಿದ್ದಾರೆ.ದಿನಂಪ್ರತಿ ನೂರಾರು ಸಂಖ್ಯೆಯಲ್ಲಿ ಜನರು ಆಸ್ಪತ್ರೆಗೆ ಆಗಮಿಸುತ್ತಿರುವುದರಿಂದ ರೋಗಿಗಳನ್ನು ಆರೈಕೆ ಮಾಡಲು ಬೆರಳೆಣಿಕೆಯಲ್ಲಿರುವ ಸಿಬ್ಬಂದಿಗಳಿಗೆ ಕಷ್ಟವಾಗುತ್ತಿದೆ.ಸಿಬ್ಬಂದಿಗಳ ಕೊರತೆಯನ್ನು ನೀಗಿಸಲು ಕ್ರಮ ಕೈಗೊಂಡರೆ ಸಿಬ್ಬಂದಿಗಳಿಗೂ ಒತ್ತಡ ಕಡಿಮೆ ಆಗಲಿದೆ.ಸಾರ್ವಜನಿಕರಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ದೊರೆಯಲಿದೆ ಎನ್ನುವುದು […]

ಸೇತುವೆ ನಿರ್ಮಾಣಕ್ಕೆ ಅನುದಾನ ನೀಡುವಂತೆ ಮನವಿ

ಕುಂದಾಪುರ:ಗಂಗೊಳ್ಳಿ ಭಾಗದ ಜನರ ಬಹುಕಾಲದ ಬೇಡಿಕೆಯಾದ ಕುಂದಾಪುರ-ಗಂಗೊಳ್ಳಿ ಸಂಪರ್ಕಕ್ಕೆ ಸೇತುವೆ ನಿರ್ಮಾಣ ಮಾಡಲು ಹಾಗೂ ರಸ್ತೆ ಅಭಿವೃದ್ಧಿಗೊಳಿಸಲು ಅನುದಾನ ಬಿಡುಗಡೆ ಮಾಡುವಂತೆ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ವಿಕಾಸ ಸೌಧದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮನವಿಯನ್ನು ನೀಡಿದರು.

ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಪ್ರಕರಣ:ಎಸ್.ಐ.ಟಿ ತನಿಖೆಗೆ ವಹಿಸುವಂತೆ ಮನವಿ

ಕುಂದಾಪುರ:ಉಡುಪಿಯಲ್ಲಿನ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಹಿಂದೂ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ತನಿಖೆಗೆ ವರ್ಗಾಯಿಸಲು ರಾಜ್ಯ ಸರಕಾರಕ್ಕೆ ಆದೇಶ ನೀಡುವಂತೆ ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಕರಾವಳಿ ಭಾಗದ ಶಾಸಕರ ನಿಯೋಗವು ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಿದರು.ಕರಾವಳಿ ಭಾಗದ ಹಿಂದುಳಿದ ತಾಲ್ಲೂಕುಗಳಲ್ಲಿ ಒಂದಾದ ಬೈಂದೂರು ತಾಲೂಕಿನಲ್ಲಿ ಆರೋಗ್ಯ ಸುಧಾರಣೆಗೆ ಕ್ರಮ ಕೈಗೊಳ್ಳಲು ಹಾಗೂ ಸಹಕಾರ ನೀಡುವಂತೆ ನಾರಾಯಣ ನೇತ್ರಾಲಯ ಮುಖ್ಯಸ್ಥ ಡಾ. […]

You cannot copy content of this page