ಆ.5 ರಂದು ಯೋಗ ಪರ್ಯಟನ,ಸತ್ಸಂಗ ಕಾರ್ಯಕ್ರಮ

ಕುಂದಾಪುರ:ವಿವೇಕ ಜಾಗ್ರತ ಬಳಗ ಮಧ್ಯ ವಲಯ,ನಾಲ್ಕು ಡಿವೈನ್ ಪಾರ್ಕ್ ಟ್ರಸ್ಟ್ ರಿಜಿಸ್ಟರ್ ಸಾಲಿಗ್ರಾಮ ಅವರ ಅಂಗಸಂಸ್ಥೆ,ಯೋಗ ಪರ್ಯಟನ ವಿಶೇಷ ಸತ್ಸಂಗ ಕಾರ್ಯಕ್ರಮ ನಾಗೂರುಒಡೆಯರ ಮಠ ಶ್ರೀ ಗೋಪಾಲಕೃಷ್ಣ ಕಲಾಮಂದಿರದಲ್ಲಿ ಆ.5 ರಂದು ಶನಿವಾರ ಮಧ್ಯಾಹ್ನ 3 ರಿಂದ 5 ಗಂಟೆಯ ವರಗೆ ಜರುಗಲಿದೆ.ಯೋಗ ಪರ್ಯಟನ ಎಂಬ ವಿಶಿಷ್ಟ ಕಾರ್ಯಕ್ರಮದೊಂದಿಗೆ ರಾಜ್ಯದಾದ್ಯಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಈಗಾಗಲೇ 17 ಜಿಲ್ಲೆಗಳಲ್ಲಿ ಜನರ ಅಭೂತಪೂರ್ವ ಸ್ಪಂದನೆ ಯೊಂದಿಗೆ ಕಾರ್ಯಕ್ರಮ ನಡೆದಿದ್ದು.18 ನೇ ಕಾರ್ಯಕ್ರಮ ಉಡುಪಿ ಜಿಲ್ಲೆಯ ಭಾಗದಲ್ಲಿ ನಡೆಯಲಿದೆ.

ಕೊಡೇರಿಯಲ್ಲಿ ದೋಣಿ ದುರಂತ,9 ಮೀನುಗಾರರು ಪಾರು

ಬೈಂದೂರು:ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಡೇರಿ ಬಂದರಿನ ಸುಮಾರು ಐದು ನಾಟಿಕಲ್ ದೂರದಲ್ಲಿ ಮೀನುಗಾರಿಕೆ ಮಾಡುತ್ತಿದ್ದ ನಾಡದೋಣಿಯೊಂದು ಸಮುದ್ರ ಅಲೆಯ ಹೊಡೆತಕ್ಕೆ ಸಿಲುಕಿ ಪಲ್ಟಿಯಾಗಿದ್ದು,ದೋಣಿಯಲ್ಲಿದ್ದ 9 ಜನ ಮೀನುಗಾರರು ಪಾರಾಗಿದ್ದಾರೆ.ಬಲೆ,ದೋಣಿಯಲ್ಲಿನ ಇಂಜಿನ್‍ಗೆ ಹಾನಿಯಾಗಿದೆ.ಅಂದಾಜು 2.ಲಕ್ಷ.ರೂ ನಷ್ಟ ಉಂಟಾಗಿದ್ದ ಘಟನೆ ಶುಕ್ರವಾರ ನಡೆದಿದೆ.ಉಪ್ಪುಂದ ಗ್ರಾಮದ ಪಾಳ್ಯದರ ತೋಪ್ಲು ಪುರ್ಶುಯ್ಯನ ಪುಂಡಲೀಕ ಎನ್ನುವವರ ಮಾಲಿಕತ್ವದ ಶ್ರೀದುರ್ಗಾಪರಮೇಶ್ವರಿ ಎನ್ನುವ ದೋಣಿಯಲ್ಲಿ ಶುಕ್ರವಾರ 9 ಜನ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು.ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿದ್ದ ಸಂದರ್ಭ ಅಲೆಯ ಹೊಡೆತಕ್ಕೆ ಸಿಲುಕಿದ ದೋಣಿ ಪಲ್ಟಿ ಹೊಡೆದು […]

ಮರವಂತೆ ಸಿಆರ್ ಝಡ್ ಕ್ಲಿಯರೆನ್ಸ್ ಗೆ ಸಂಸದ ಬಿ.ವೈ ರಾಘವೇಂದ್ರ ಕೇಂದ್ರ ಸಚಿವರಿಗೆ ಮನವಿ

ಕುಂದಾಪುರ:ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಬೈಂದೂರು ತಾಲೂಕಿನ ಮರವಂತೆ ಹೊರ ಬಂದರಿನ ಎರಡನೇ ಹಂತದ ಕಾಮಗಾರಿ ಕೆಲಸಕ್ಕೆ ಈಗಾಗಲೇ 85 ಕೋಟಿ.ರೂ ಮಂಜೂರಾಗಿದ್ದು ಬಂದರಿನ ಕಾಮಗಾರಿ ಕೆಲಸ ಆದಷ್ಟು ಬೇಗ ಆರಂಭಿಸಲು ಸಿಆರ್ ಝಡ್ ಕ್ಲಿಯರೆನ್ಸ್ ನೀಡುವಂತೆ ಸಂಸದ ಬಿ.ವೈ.ರಾಘವೇಂದ್ರ ಅವರು ಕೆಂದ್ರ ಬಂದರು ಮತ್ತು ಮೀನುಗಾರಿಕೆ ಸಚಿವರಾದ ಸರ್ಬಾನಂದ್ ಸೋನುವಾಲ್ ಅವರನ್ನು ದೆಹಲಿಯಲ್ಲಿ ಭೇಟಿಮಾಡಿ ಮನವಿಯನ್ನು ಮಾಡಿದ್ದಾರೆ. ಇತ್ತೀಚಿಗೆ ಬೈಂದೂರು ತಾಲೂಕಿನ ಉಪ್ಪುಂದ ಕರ್ಕಿಕಳಿ ಎಂಬಲ್ಲಿ ಸಂಭವಿಸಿದ ದೋಣಿ ದುರಂತದಲ್ಲಿ ಇಬ್ಬರು ಮೀನುಗಾರರು ಮೃತಪಟ್ಟ ವಿಷಯವನ್ನು […]

You cannot copy content of this page