ಭೀಕರ ಬಿರುಗಾಳಿಗೆ,74ನೇ ಉಳ್ಳೂರು ಗ್ರಾಮದಲ್ಲಿ ಹಾನಿ

ಕುಂದಾಪುರ:74ನೇ ಉಳ್ಳೂರು ಗ್ರಾಮದಲ್ಲಿ ಬುಧವಾರ ಬೆಳಗಿನ ಜಾವ ಇದ್ದಕ್ಕಿದ್ದಂತೆ ಬಿಸಿದ ಭೀಕರ ಸುಂಟರಗಾಳಿಗೆ ಮನೆ ಹಾಗೂ ಅಡಿಕೆ,ತೆಂಗಿನ ತೋಟಕ್ಕೆ ಹಾನಿ ಆಗಿ ನೂರಾರು ಮರಗಳು ಬುಡ ಸಮೇತ ಧರೆಗೆ ಉರುಳಿ ಬಿದ್ದು ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಭೀಕರ ಬಿರುಗಾಳಿಯಿಂದ ಹಾನಿಗೊಳಗಾದ 74ನೇ ಉಳ್ಳೂರು ಗ್ರಾಮಕ್ಕೆ ಬೈಂದೂರು ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬೆಳೆ ಹಾನಿಯ ಬಗ್ಗೆ ಶೀಘ್ರವಾಗಿ ಸ್ಥಳಕ್ಕೆ ಭೇಟಿನೀಡಿ ಪರಿಹಾರ ಬಿಡುಗಡೆ ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಈ ಸಂದರ್ಭದಲ್ಲಿ […]

ಕಡಲ್ಕೊರೆತ ಪ್ರದೇಶಕ್ಕೆ ಸಿ.ಎಂ ಸಿದ್ದರಾಮಯ್ಯ ಭೇಟಿ,ಪರಿಶೀಲನೆ

ಮಂಗಳೂರು-ಭೀಕರ ಕಡಲ್ಕೊರೆತ ಉಂಟಾಗಿ ಹಾನಿ ಸಂಭವಿಸಿದ ದ.ಕ ಜಿಲ್ಲೆಯ ಉಳ್ಳಾಲ ತಾಲೂಕಿನ ಬಟ್ಟಪಾಡಿಯ ಕಡಲ್ಕೊರೆತ ಹಾನಿ ಪ್ರದೇಶಕ್ಕೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ,ಪರಿಸ್ಥಿತಿಯನ್ನು ಪರಿಶೀಲಿಸಿ,ಸ್ಥಳೀಯರೊಂದಿಗೆ‌ ಮಾತನಾಡಿದರು. ಈ ಸಂದರ್ಭದಲ್ಲಿ ರಾಜ್ಯ ವಿಧಾನಸಭೆಯ ಸ್ವೀಕರ್ ಯು.ಟಿ. ಖಾದರ್,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್,ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ. ಅತೀಕ್, ಜಿಲ್ಲಾಧಿಕಾರಿ ಮುಲ್ಲೈ ‌ಮುಗಿಲನ್ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಮುಖಂಡರು, ಸಂತ್ರಸ್ತರು ಉಪಸ್ಥಿತರಿದ್ದರು.

ಬಿಜೆಪಿ ಪಕ್ಷದ ವಿಶೇಷ ಕಾರ್ಯಕಾರಿಣಿ ಸಭೆ

ಕುಂದಾಪುರ:ಸರಕಾರದ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಸಿಗದೆ ಇರುವುದರಿಂದ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ರಾಜ್ಯ ಸರಕಾರದ ವಿರುದ್ಧ ಅಸಮಾಧಾನವನ್ನು ವ್ಯಕ್ತಪಡಿಸಿದರು.ತ್ರಾಸಿ ಕೊಂಕಣ ಖಾರ್ವಿ ಸಭಾಭವನದಲ್ಲಿ ಬುಧವಾರ ನಡೆದ ಬಿಜೆಪಿ ಪಕ್ಷದ ಬೈಂದೂರು ಮಂಡಲ ಅದರ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸಭೆ ಅಧ್ಯಕ್ಷತೆಯನ್ನು ವಹಿಸಿದ್ದ ಬಿಜೆಪಿ ಬೈಂದೂರು ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮಾತನಾಡಿ,ಮುಂದಿನ ಮೂರು ತಿಂಗಳುಗಳ ಅವಧಿಯಲ್ಲಿ ಪಕ್ಷದ […]

You cannot copy content of this page