ಉಡುಪಿ ಕಾಲೇಜಿನ ಮೊಬೈಲ್ ಚಿತ್ರೀಕರಣ ಪ್ರಕರಣ: ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಇಲ್ಲ: ಸಿಎಂ ಸಿದ್ದರಾಮಯ್ಯ

ಮಂಗಳೂರು:ಉಡುಪಿ ಕಾಲೇಜೊಂದರಲ್ಲಿ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ಯೂ ಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್ ಐ ಆರ್ ಆಗಿದೆ. ತನಿಖೆಯನ್ನು ಡಿ ವೈಎಸ್ಪಿ ಮಟ್ಟದ ಅಧಿಕಾರಿ ಮಾಡುತ್ತಿದ್ದು, ಪ್ರಕರಣವನ್ನು ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಂಗಳವಾರ ಮಂಗಳೂರಿಗೆ ಆಗಮಿಸಿದ ಸಿಎಂ ಮಾಧ್ಯಮದವರೊಂದಿಗೆ ಮಾತನಾಡಿದರು.ಕೇಂದ್ರ ಮಹಿಳಾ ಆಯೋಗದ ಸದಸ್ಯರು ಆಗಮಿಸಿ ತನಿಖೆ ಕೈಗೊಂಡು ಕಾಲೇಜಿನ ಶೌಚಾಲಯದಲ್ಲಿ ಕ್ಯಾಮರಾ ಇರಲಿಲ್ಲ ಎಂದು ಹೇಳಿದ್ದಾರೆ. ತನಿಖೆಯಾಗಿ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.ಗೃಹ […]

ಸಮುದ್ರದಲ್ಲಿ ನಾಪತ್ತೆ ಆಗಿದ್ದ,ಸತೀಶ್ ಖಾರ್ವಿ ಶವ ಪತ್ತೆ

ಕುಂದಾಪುರ:ಬೈಂದೂರು ತಾಲೂಕಿನ ಉಪ್ಪುಂದ ಕರ್ಕಿಕಳಿ ಕಡಲ ತೀರದ ಬಳಿ ಸೋಮವಾರ ನಾಡದೋಣಿ ಮೂಲಕ ಮೀನುಗಾರಿಕೆ ಮುಗಿಸಿಕೊಂಡು ಹಿಂದಿರುಗುತ್ತಿದ್ದಾಗ ಕಡಲ ಅಲೆಯ ಅಬ್ಬರಕ್ಕೆ ದೋಣಿ ಮಗುಚಿದ ಪರಿಣಾಮ ಸಮುದ್ರದಲ್ಲಿ ನಾಪತ್ತೆ ಆಗಿದ್ದ ಸತೀಶ್ ಖಾರ್ವಿ (30) ಅವರ ಮೃತ ದೇಹ ಕೊಡೇರಿ ಬಂದರು ಸಿವಾಕ್ ಬಳಿ ಮಂಗಳವಾರ ರಾತ್ರಿ ಪತ್ತೆ ಆಗಿದೆ.ನಾಡದೋಣಿ ಮೂಲಕ ಮೀನುಗಾರಿಕೆಯಲ್ಲಿ ತೊಡಗಿಕೊಂಡು ದಡಕ್ಕೆ ಮರಳಿ ಬರುತ್ತಿರುವ ಸಂದರ್ಭದಲ್ಲಿ ಅಲೆಯ ಹೊಡೆತಕ್ಕೆ ದೋಣಿ ಮಗುಚಿ ಬಿದ್ದದರಿಂದ ದೋಣಿಯಲ್ಲಿದ್ದ 7 ಜನರ ಮೀನುಗಾರರ ಪೈಕಿ 5 ಜನ […]

ಜನ ಸೇವೆ ಮಾಡಲು ಸಿದ್ದರಿಲ್ಲದಿದ್ದವರು ಸ್ಥಾನ ತ್ಯಾಗ ಮಾಡಿ-ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ

ಉಡುಪಿ:ಜನರ ಕೆಲಸ ಮಾಡುವ ವಿಚಾರದಲ್ಲಿ ರಾಜಕೀಯ ಮಾಡಬಾರದು ಪಕ್ಷ ರಾಜಕಾರಣ ಚುನಾವಣೆ ವೇಳೆ ಮಾತ್ರ.ಅಧಿಕಾರಿಗಳು ನಿರ್ಲಕ್ಷ್ಯ,ಉದಾಶೀನ ತೋರಿಸಿದರೆ ಜನರ ಸಮಸ್ಯೆಗಳಿಗೆ ಸ್ಪಂದನೆ ಮಾಡದಿದ್ದರೆ ಎಷ್ಟೇ ದೊಡ್ಡ ಅಧಿಕಾರಿಯಾಗಿದ್ದರೂ ಸಹಿಸಲು ಸಾಧ್ಯವಿಲ್ಲ,ಜನ ಸೇವೆ ಮಾಡಲು ಸಿದ್ದರಿಲ್ಲದಿದ್ದವರು ಸ್ಥಾನ ತ್ಯಾಗ ಮಾಡಿ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ಅಧಿಕಾರಿಗಳಿಗೆ ಖಡಕ್ ಸೂಚನೆಯನ್ನು ನೀಡಿದರು.ಉಡುಪಿ ಜಿಲ್ಲಾ ಪಂಚಾಯತ್‍ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಗತಿ ಪರೀಶೀಲನಾ ಸಭೆಯಲ್ಲಿ ಭಾಗವಹಿಸಿದ ಸಿಎಂ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ […]

You cannot copy content of this page