ಲಯನ್ಸ್ ಕ್ಲಬ್ ನಾವುಂದ ಪದಗ್ರಹಣ ಕಾರ್ಯಕ್ರಮ

ಕುಂದಾಪುರ:ಸಂಘಟನೆಗಳು ಪ್ರಾಮಾಣಿಕ,ಸತ್ಯ,ನಿಷ್ಠೆ ಮತ್ತು ಸಮಾಜಮುಖಿ ಚಿಂತನೆಗಳನ್ನು ಅಳವಡಿಸಿಕೊಂಡಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಲಯನ್ಸ್ ದ್ವಿತೀಯ ಜಿಲ್ಲಾ ಗವರ್ನರ್ ಸಪ್ನಾ ಸುರೇಶ ಹೇಳಿದರು.ಲಯನ್ಸ್ ಕ್ಲಬ್ ನಾವುಂದ ವತಿಯಿಂದ ಅರೆಹೊಳೆ ಮಹಾಲಸಾ ಸಭಾಭವನದಲ್ಲಿ ನಡೆದ ಕ್ಲಬ್ಬಿನ 2023-24 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳಿಗೆ ಪದಪ್ರದಾನಿಸಿ ಅವರು ಮಾತನಾಡಿದರು.ನಾವುಂದ ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಅಧ್ಯಕ್ಷತೆವಹಿಸಿದ್ದರು.ಲಯನ್ಸ್ ಜಿಲ್ಲಾ ಪೂರ್ವ ಗವರ್ನರ್ ವಿಶ್ವನಾಥ ಶೆಟ್ಟಿ,ವಲಯಾಧ್ಯಕ್ಷ ಜಗದೀಶ ಶೆಟ್ಟಿ ಕುದ್ರುಕೋಡು,ಪ್ರಾಂತೀಯ ಅಧ್ಯಕ್ಷ ಏಕನಾಥ […]

ಉಪ್ಪುಂದ ಕರ್ಕಿಕಳಿಯಲ್ಲಿ ದೋಣಿ ದುರಂತ;ಓರ್ವ ಮೀನುಗಾರ ಸಾವು,ಇನ್ನೊಬ್ಬ ನಾಪತ್ತೆ

ಕುಂದಾಪುರ:ಮೀನುಗಾರಿಕೆಗೆ ತೆರಳಿ ಹಿಂದಿರುಗುತ್ತಿದ್ದ ಸಂದರ್ಭ ಅಲೆಯ ರಭಸಕ್ಕೆ ನಾಡದೋಣಿಯೊಂದು ಸಮುದ್ರದಲ್ಲಿ ಮಗುಚಿ ಬಿದ್ದ ಪರಿಣಾಮ ಓರ್ವ ಮೀನುಗಾರ ಮೃತ ಪಟ್ಟಿದ್ದು,ಇನ್ನೋರ್ವ ಮೀನುಗಾರ ಸಮುದ್ರದಲ್ಲಿ ನಾಪತ್ತೆ ಆಗಿದ್ದ ಘಟನೆ ಬೈಂದೂರು ತಾಲೂಕಿನ ಉಪ್ಪುಂದ ಕರ್ಕಿಕಳಿಯಲ್ಲಿ ಸೋಮವಾರ ಸಂಜೆ ನಡೆದಿದೆ.ಮೀನುಗಾರಿಕೆಯಲ್ಲಿ ತೊಡಗಿಕೊಳ್ಳುವ ಹಿನ್ನೆಲೆಯಲ್ಲಿ 8 ಜನರಿದ್ದ ಮೀನುಗಾರರ ತಂಡ ನಾಡದೋಣಿ ಮೂಲಕ ಸಮುದ್ರಕ್ಕೆ ತೆರಳಿದ್ದಾರೆ,ಮೀನುಗಾರಿಕೆ ಮುಗುಸಿಕೊಂಡು ಮರಳಿ ದಡಕ್ಕೆ ಬರುತ್ತಿರುವ ಸಂದರ್ಭದಲ್ಲಿ ಸಮುದ್ರ ಅಲೆಗಳ ಹೊಡೆತಕ್ಕೆ ಸಿಲುಕಿದ ನಾಡದೋಣಿ ಮಗುಚಿ ಬಿದ್ದಿದೆ.ದೋಣಿ ದುರಂತದಲ್ಲಿ ನಾಗೇಶ್ ಖಾರ್ವಿ (30) ಮೃತ ಪಟ್ಟಿದ್ದಾರೆ,ಸತೀಶ್ […]

ಕಾರು ಡಿಕ್ಕಿ ಹೊಡೆದು,ದ್ವಿಚಕ್ರ ವಾಹನ ಸವಾರ ಸಾವು

ಕುಂದಾಪುರ:ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರವಾಹನ ಸವಾರಾದ ನರಸಿಂಹ ಶೆಟ್ಟಿ (75) ಮೃತ ಪಟ್ಟಿದ್ದಾರೆ.ಕೋಟೇಶ್ವರ ಹಾಲಾಡಿ ಮುಖ್ಯ ರಸ್ತೆಯಲ್ಲಿ ಏಕಾಏಕಿ ಆಗಿ ಕಾರಿಗೆ ದ್ವಿಚಕ್ರವಾಹನ ಹಠಾತ್ ಆಗಿ ಅಡ್ಡ ಬಂದ ಪರಿಣಾಮ ಇವೊಂದು ಘಟನೆ ನಡೆದಿದೆ ಎಂದು ಹೇಳಲಾಗುತ್ತಿದ್ದು,ನಿಯಂತ್ರಣ ಕಳೆದುಕೊಂಡಿದ್ದ ಕಾರು ರಸ್ತೆ ಪಕ್ಕದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದು ನಿಂತಿದೆ.ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದ್ವಿಚಕ್ರವಾಹನ ಸವಾರರಾದ ನರಸಿಂಹ ಶೆಟ್ಟಿ ಅವರು ಮೃತರಾಗಿದ್ದಾರೆ.ಕಾರಿನ ಮುಂಭಾಗ ಜಖಂಗೊಂಡಿದ್ದು ಕಾರು ಚಾಲಕ ಪಾರಾಗಿದ್ದಾರೆ.ಕುಂದಾಪುರ ಸಂಚಾರಿ ಠಾಣೆ ಪೊಲೀಸರು […]

You cannot copy content of this page