ನಿವೃತ್ತ ಶಿಕ್ಷಕ ಕರುಣಾಕರ ಶೆಟ್ಟಿಗೆ ಸನ್ಮಾನ

ಕುಂದಾಪುರ:ಬೈಂದೂರು ವಲಯದ ಪ್ರಾಥಮಿಕ ಶಿಕ್ಷಕರ ಸಂಘದ ಮಾಜಿ ಗೌರವಾಧ್ಯಕ್ಷರಾದ,ಶಿಕ್ಷಕ ವೃತ್ತಿಯಿಂದ ಇತ್ತೀಚೆಗೆ ಸೇವಾ ನಿವೃತ್ತಿ ಹೊಂದಿರುವ ಕರುಣಾಕರ ಶೆಟ್ಟಿ ಕೆರಾಡಿ ಅವರನ್ನು ಬೈಂದೂರು ವಲಯದ ಪ್ರಾಥಮಿಕ ಶಿಕ್ಷಕರ ಸಂಘದ ವತಿಯಿಂದ ಸನ್ಮಾನಿಸಲಾಯಿತು.ಈ ಸಂದರ್ಭ ಸಂಘದ ಕಾರ್ಯದರ್ಶಿ ಗಣಪತಿ ಹೋಬಳಿದಾರ್,ಉಪಾಧ್ಯಕ್ಷ ಸುನೀಲ್ ಶೆಟ್ಟಿ,ಖಜಾಂಚಿ ಅಚ್ಚುತ ಬಿಲ್ಲವ ಹಾಗೂ ಸಂಘದ ಪದಾಧಿಕಾರಿಗಳು,ಅನುದಾನಿತ ಶಾಲೆಯ ಶಿಕ್ಷಕರು,ನಿವೃತ್ತ ಶಿಕ್ಷಕರು ಉಪಸ್ಥಿತರಿದ್ದರು.

ವರಾಹ ಮತ್ತು ಗಂಗಾಧರೇಶ್ವರ ದೇವಳಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮಾಯ

ಬೈಂದೂರು:ಮರವಂತೆ ವರಾಹ ದೇವಸ್ಥಾನದಿಂದ ಗಂಗಾಧರೇಶ್ವರ ದೇವಸ್ಥಾನದವರೆಗೆ ಸೌಪರ್ಣಿಕಾ ನದಿ ತೀರ ಪ್ರದೇಶದಲ್ಲಿ ನಿರ್ಮಿಸಿದ ಸಂಪರ್ಕ ರಸ್ತೆ ನದಿ ನೀರಿನ ಸೆಳೆತಕ್ಕೆ ಕೊಚ್ಚಿಕೊಂಡು ಹೋಗಿದ್ದು ಲಕ್ಷಾಂತರ.ರೂ ನಷ್ಟ ಸಂಭವಿಸಿದೆ.ಸಣ್ಣ ನೀರಾವರಿ ಇಲಾಖೆ ಅನುದಾನದಡಿ 1.20 ಕೋಟಿ.ರೂ ವೆಚ್ಚದಲ್ಲಿ ಕಳೆದ ಸಾಲಿನಲ್ಲಿ ನಿರ್ಮಾಣಗೊಂಡಿದ್ದ 300 ಮೀಟರ್ ವರೆಗಿನ ಸಂಪರ್ಕ ರಸ್ತೆ ಮಳೆ ನೀರಿನ ಹೊಡೆತಕ್ಕೆ ಕಾಣದಂತೆ ಮಾಯವಾಗಿದೆ.ಗುತ್ತಿಗೆದಾರರ ನಿರ್ಲಕ್ಷ್ಯ ತನ ಮತ್ತು ಅವೈಜ್ಞಾನಿಕ ಕಾಮಗಾರಿ ಫಲವಾಗಿ ಮರವಂತೆ ವರಾಹ ದೇವಸ್ಥಾನ ಮತ್ತು ಗಂಗಾಧರೇಶ್ವರ ದೇವಸ್ಥಾನಕ್ಕೆ ಸಂಪರ್ಕ ಬೇಸುವ ರಸ್ತೆ ಮಳೆ […]

ರಸ್ತೆಗೆ ಒರಗಿದ ಮರ ತೆರವು

ಕುಂದಾಪುರ:ಬೈಂದೂರು ತಾಲೂಕಿನ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೇಮುಂಜೆ ಮಾರ್ಗ ಮಧ್ಯದಲ್ಲಿ ಭಾರಿ ಗಾಳಿಮಳೆಗೆ ಬುಡ ಸಮೇತ ರಸ್ತೆಗೆ ಅಡ್ಡಲಾಗಿ ಬಿದ್ದ ಮರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಡುಕೋಣೆ ವಲಯದ ವಿಪತ್ತು ನಿರ್ವವಹಣ ತಂಡದ ವತಿಯಿಂದ ತೆರವು ಮಾಡಲಾಯಿತು.ಈ ಸಂದರ್ಭ ಸಂಘದ ಸದಸ್ಯರು ಉಪಸ್ಥಿತರಿದ್ದರು.

You cannot copy content of this page