ಉಡುಪಿ:ನೂತನ ಜಿಲ್ಲಾಧಿಕಾರಿಯಾಗಿ ಡಾ.ವಿದ್ಯಾಕುಮಾರಿ ನೇಮಕ

ಕುಂದಾಪುರ:ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಕೂರ್ಮರಾವ್ ಅವರು ಸರಕಾರದ ಆದೇಶದ ಮೆರೆಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ನೂತನ ಜಿಲ್ಲಾಧಿಕಾರಿಯಾಗಿ ಡಾ.ವಿದ್ಯಾಕುಮಾರಿ ಅವರು ನೇಮಕಗೊಂಡಿದ್ದಾರೆ.ಡಾ.ವಿದ್ಯಾಕುಮಾರಿ ಅವರು ಈ ಹಿಂದೆ ಉಡುಪಿ ಜಿಲ್ಲೆಯ ಎಡಿಸಿಯಾಗಿ ಸೇವೆ ಸಲ್ಲಿಸಿದ್ದರು.ಮೂಲತಃ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರಾಗಿರುವ ಅವರು 2014ನೇ ಬ್ಯಾಚ್‍ನ ಐಎಎಸ್ ಅಧಿಕಾರಿಯಾರಿ.

ಮರದ ಕಾಲು ಸಂಕಕ್ಕೆ ಮುಕ್ತಿ,ಸರಾಗ ಸಂಚಾರಕ್ಕೆ ಅನುಕೂಲ

ಕುಂದಾಪುರ:ಜಡ್ಕಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಡೆಪಾಲು –ಮುದ್ಗಮ್ಮಿ ಎಂಬಲ್ಲಿ ಇದ್ದ ಅಪಾಯಕಾರಿ ಮರದ ಕಾಲು ಸಂಕಕ್ಕೆ ಮುಕ್ತಿ ನೀಡಿ ನರೇಗಾ ಯೋಜನೆಯಡಿ ಹೊಸ ಕಾಲುಸಂಕವನ್ನು ನಿರ್ಮಾಣ ಮಾಡಲಾಗಿದೆ.ಸುಸಜ್ಜಿತವಾದ ಕಾಂಕ್ರಿಟ್ ಕಾಲು ಸಂಕ ನಿರ್ಮಾಣವಾಗಿರುವುದರಿಂದ ಅಲ್ಲಿನ ನಿವಾಸಿಗಳಿಗೆ ಸರಾಗವಾಗಿ ಸಂಚಾರ ಮಾಡಬಹುದಾಗಿದೆ.ಜಡ್ಕಲ್ ಕೊಡೆಪಾಲು –ಮುದ್ಗಮ್ಮಿ ಪರಿಸರದಲ್ಲಿ ಕಾಲು ಸಂಕ ನಿರ್ಮಾಣದಿಂದ ಶಾಲಾ ಮಕ್ಕಳಿಗೆ ಹಾಗೂ ಪರಿಸರದ ಸುಮಾರು 25 ಮನೆಗಳಿಗೆ ಅನುಕೂಲವಾಗಲಿದ್ದು ನಿವಾಸಿಗಳ ಮೊಗದಲ್ಲಿ ಮಂದಹಾಸ ಮೂಡಿದೆ.ಬೈಂದೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ ಅವರು ಸ್ಥಳಕ್ಕೆ ಭೇಟಿ […]

ಎನ್ ಜಿಟಿ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ:ಎನ್ ಜಿಟಿಗೆ ಅರ್ಜಿ ಸಲ್ಲಿಸಿದ್ದ ಅರ್ಜಿದಾರನಿಗೆ ನೋಟಿಸ್

ಬೆಂಗಳೂರು:ದೆಹಲಿ ಲೆಫ್ಟಿನೆಂಟ್ ಗವರ್ನರ್ ಅವರು ಯಮುನಾ ನದಿ ಸ್ವಚ್ಛಗೊಳಿಸುವುದಕ್ಕೆ ಸಂಬಂಧಿಸಿ ರಚಿಸಿರುವ ಉನ್ನತ ಮಟ್ಟದ ಸಮಿತಿ ನೇತೃತ್ವ ವಹಿಸಿಕೊಳ್ಳುವಂತೆ ಸೂಚಿಸಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.ಎನ್ ಜಿಟಿ ಆದೇಶ ಪ್ರಶ್ನಿಸಿ ದೆಹಲಿ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್ ನರಸಿಂಹ ಮತ್ತು ಮನೋಜ್ ಮಿಶ್ರಾ ಅವರಿದ್ದ ನ್ಯಾಯಪೀಠ ನಡೆಸಿದೆ.ಎನ್ ಜಿಟಿಗೆ ಸಲ್ಲಿಸಿದ್ದ ಅರ್ಜಿದಾರನಿಗೆ ನೋಟಿಸ್ ನೀಡಿ ನ್ಯಾಯಪೀಠ, ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿತು.ಎನ್ […]

You cannot copy content of this page