ಮರವಂತೆ ಬೀಚ್ ನಲ್ಲಿ ನೀರಿಗೆ ಇಳಿದ ಪ್ರವಾಸಿಗ ಸಮುದ್ರ ಪಾಲು

ಕುಂದಾಪುರ:ಪಡುಬಿದ್ರಿ ಯಿಂದ ಹುಬ್ಬಳ್ಳಿ ಕಡೆಗೆ ಸಾಗುತ್ತಿದ್ದ ಟ್ಯಾಂಕರ್‍ನ್ನು ಹತ್ತಿಕೊಂಡು ಬಂದಿದ್ದ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಮೆವಂಡಿ ನಿವಾಸಿ ಪೀರೂ ನದಾಫ್ (22) ಎನ್ನುವ ಯುವಕನೊಬ್ಬ ತ್ರಾಸಿ-ಮರವಂತೆ ಬೀಚ್‍ನಲ್ಲಿ ಸಮುದ್ರಕ್ಕೆ ಇಳಿದ ಪರಿಣಾಮ ನೀರಿನ ಸೆಳೆತಕ್ಕೆ ಕೊಚ್ಚಿಕೊಂಡು ಹೋಗಿದ್ದು ಸಮುದ್ರದಲ್ಲಿ ನಾಪತ್ತೆ ಆದ ಘಟನೆ ಮಂಗಳವಾರ ನಡೆದಿದೆ. ಉಡುಪಿಯಲ್ಲಿ ಮೇಸ್ತ್ರಿ ಕೆಲಸವನ್ನು ಮಾಡಿಕೊಂಡಿರುವ ಗದಗ ಜಿಲ್ಲೆಯ ಪೀರೂ ನದಾಫ್ ಎನ್ನುವ ಯುವಕ ಊರಿಗೆ ಹೋಗುವ ಸಲುವಾಗಿ ಹುಬ್ಬಳ್ಳಿ ಕಡೆಗೆ ಸಾಗುತ್ತಿದ್ದ ಟ್ಯಾಂಕರ್‍ನ್ನು ಉಡುಪಿಯಲ್ಲಿ ಅಡ್ಡ ಗಟ್ಟಿ ಹತ್ತಿಕೊಂಡಿದ್ದಾನೆ.ಮಧ್ಯಾಹ್ನ […]

ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ ಉಮನ್ ಚಾಂಡಿ ನಿಧನ

ಬೆಂಗಳೂರು:ಕಾಂಗ್ರೆಸ್ ಪಕ್ಷದ ಹಿರಿಯ ನೇತಾರ,ಎರಡು ಬಾರಿ ಕೇರಳ ರಾಜ್ಯದ ಮುಖ್ಯ ಮಂತ್ರಿ ಆಗಿ ಜನಸೇವೆ ಮಾಡಿರುವ ಮಾಜಿ ಮುಖ್ಯ ಮಂತ್ರಿ ಉಮನ್ ಚಾಂಡಿ ಅವರು ನಿಧನರಾದರು.ವಿದ್ಯಾರ್ಥಿ ಜೀವನದಲ್ಲೆ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಉಮನ್ ಚಾಂಡಿ ಅವರು,ಸತತ 53 ವರ್ಷಗಳ ಕಾಲ ಒಂದೇ ಕ್ಷೇತ್ರವನ್ನು ಪ್ರತಿನಿಧಿಸಿ ಐತಿಹಾಸಿಕ ದಾಖಲೆಯನ್ನು ನಿರ್ಮಿಸಿದ್ದರು.ಕಾಂಗ್ರೆಸ್ ಪಕ್ಷದ ನಿಷ್ಠಾಂವತ ನಾಯಕನಾಗಿ ಗುರುತಿಸಿಕೊಂಡಿದ್ದಾರೆ.

ಟಿಪ್ಪರ್ ಗೆ ಸಿಲುಕಿದ ಸ್ಯಾಂಟ್ರೊ ಕಾರ್,ಕಿಲೋಮೀಟರ್ ವರೆಗೆ ಎಳೆದು ಕೊಂಡು ಹೋದ ಚಾಲಕ

ಪಡುಬಿದ್ರಿ:ಸ್ಯಾಂಟ್ರೊ ಕಾರ್ ಟಿಪ್ಪರ್ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ,ಕಾರಿನ ಮುಂಭಾಗ ನಜ್ಜುಗುಜ್ಜಾಗಿ ಟಿಪ್ಪರ್ ಹಿಂಬದಿ ಬಾಡಿ ಒಳಗೆ ಸಿಲುಕಿ ಕೊಂಡಿದೆ.ಅಪಘಾತ ಸಂಭವಿಸಿದ್ದರು ಟಿಪ್ಪರ್ ಚಾಲಕ ತನ್ನ ಗಾಡಿಯನ್ನು ನಿಲ್ಲಿಸದೆ ಕಾರಿನಲ್ಲಿದ್ದಾ ಪ್ರಯಾಣಿಕರ ಸಹಿತ ಕಾರನ್ನು ಎಳೆದುಕೊಂಡು ಅಸಡ್ಡೆಯಿಂದ ಟಿಪ್ಪರ್ ಚಲಾಯಿಸಿಕೊಂಡು ಹೋಗಿದ ಘಟನೆ ಪಡುಬಿದ್ರಿಯಲ್ಲಿ ಸೋಮವಾರ ನಡೆದಿದೆ.ಹೆಜಮಾಡಿ ಟೋಲ್‍ಗೇಟ್ ಬಳಿ ಟಿಪ್ಪರನ್ನು ಅಡ್ಡ ನಿಲ್ಲಸಿ,ಕಾರಿನಲ್ಲಿದ್ದ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಹೆಚ್ಚಿನ ತನಿಖೆಯನ್ನು ನಡೆಸಿದ್ದಾರೆ.ಅದೆ ದಾರಿಯಲ್ಲಿ ಸಾಗುತ್ತಿದ್ದ ಇನ್ನೊಂದು ಕಾರಿನಲ್ಲಿದ್ದವರು ತಮ್ಮ ಮೊಬೈಲ್ […]

You cannot copy content of this page