ಮರವಂತೆ:ಶ್ರೀ ಮಹಾರಾಜ ಸ್ವಾಮಿ,ಶ್ರೀ ವರಾಹ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆ ಜಾತ್ರೆ-ಆಗಸ್ಟ್.16 ಕ್ಕೆ
ಕುಂದಾಪುರ:ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಪ್ರಸಿದ್ಧ ಮರವಂತೆ ಮಹಾರಾಜ ಸ್ವಾಮಿ,ಶ್ರೀ ವರಾಹ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಆಗಸ್ಟ್.16 ರಂದು ಸಂಪ್ರದಾಯ ಬದ್ಧವಾಗಿ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ. ಮರವಂತೆ ಶ್ರೀ ಮಹಾರಾಜ ಸ್ವಾಮಿ,ಶ್ರೀ ವರಾಹ ದೇವಸ್ಥಾನದಲ್ಲಿ ಈ ಬಾರಿಯ ಕರ್ಕಾಟಕ ಅಮಾವಾಸ್ಯೆ ಜಾತ್ರೆಯು ಜುಲೈ.17 ರಂದು ನಡೆಯಲಿದೆ ಎಂದು ಕೆಲವು ಕ್ಯಾಲೆಂಡರ್ಗಳಲ್ಲಿ ತಪ್ಪಾಗಿ ನಮೂದಾಗಿರುವುದರಿಂದ ಸಾರ್ವಜನಿಕ ವಲಯದಲ್ಲಿ ಗೊಂದಲ ಸೃಷ್ಟಿಯಾಗಿತ್ತು.ಈ ಬಗ್ಗೆ ಸ್ಪಷ್ಟನೆಯನ್ನು ನೀಡಿರುವ ದೇವಳದ ಆಡಳಿತ ಸಮಿತಿ […]





























































































































































































































































































































































































































































































































































































































































































































































































































































































































































































































































































































































































































































































































































































































































































