ವಂಡ್ಸೆ ಎಸ್ಎಲ್ಆರ್ ಎಂ ಘಟಕದಲ್ಲಿ ಗಬ್ಬು ನಾರುತ್ತಿದೆ ಕಸ:ವಿಲೇವಾರಿಗೆ ಆಗ್ರಹ
ಕುಂದಾಪುರ:ವಂಡ್ಸೆ ಗ್ರಾಮ ಪಂಚಾಯತಿಯ ಹಳೆ ಎಸ್ಎಲ್ಆರ್ ಎಂ ಘಟಕದಲ್ಲಿರುವ ಕಸ ವಿಲೇವಾರಿ ಮಾಡದೆ ಇರುವುದರಿಂದ ಮಳೆಯಲ್ಲಿ ಕೊಳೆತು ಗಬ್ಬು ನಾರುತ್ತಿದೆ ಪರಿಸರದಲ್ಲಿರುವ ಶಾಲಾ ಮಕ್ಕಳಿಗೆ ತೊಂದರೆ ಆಗಿದ್ದು,ಕಸವನ್ನು ವಿಲೇವಾರಿ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಕಸವನ್ನು ಸೂಕ್ತವಾದ ರೀತಿಯಲ್ಲಿ ವಿಲೇವಾರಿ ಮಾಡುವ ದೃಷ್ಟಿಯಿಂದ ಎಸ್ಎಲ್ಆರ್ ಎಂ ಘಟಕವನ್ನು ಗ್ರಾಮ ಪಂಚಾಯತ್ ಮಟ್ಟದಲ್ಲಿ ಸ್ಥಾಪಿಸಲಾಗಿದೆ.ಸಾರ್ವಜನಿಕರಿಂದ ಉತ್ತಮವಾದ ರೀತಿಯಲ್ಲಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಎಸ್ಎಲ್ಆರ್ ಎಂ ಘಟಕದ ಸ್ಥಾಪನೆ ಸಾರ್ಥಕ ಮನೋಭಾವವನ್ನು ಕಂಡಿದೆ.ವಂಡ್ಸೆ ಅಂಗನವಾಡಿ ಕೇಂದ್ರ ಮತ್ತು ಸರಕಾರಿ ಶಾಲೆ […]





















































































































































































































































































































































































































































































































































































































































































































































































































































































































































































































































































































































































































































































































































































































































































