ಕೋಡಿ ಕನ್ಯಾಣ,ಹಂಗಾರಕಟ್ಟೆ ಬಂದರಿಗೆ ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಭೇಟಿ: ಮೀನುಗಾರರ ಸಮಸ್ಯೆಗಳಿಗೆ ಸ್ಪಂದನೆ

ಕುಂದಾಪುರ:ಮೀನುಗಾರರ ಸಮಸ್ಯೆಗಳು ಹಂತ- ಹಂತಗಳಲ್ಲಿ ಬಗೆಹರಿಸುವ ಇಚ್ಛಾಶಕ್ತಿ ನಮ್ಮ ಸರಕಾರಕ್ಕಿದೆ ಎಂದು ಬಂದರು,ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಹೇಳಿದರು.ಭಾನುವಾರ ಕೋಡಿಕನ್ಯಾಣ ಮೀನುಗಾರಿಕೆ ಬಂದರು ಪ್ರದೇಶದಕ್ಕೆ ಭೇಟಿ ನೀಡಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಕಡಲ್ಕೊರೆತ ಸಮಸ್ಯೆ ಕಾಸರಗೋಡಿನಿಂದ ಕಾರವಾರ- ಗೋವಾದ ತನಕ ಹಬ್ಬಿದೆ. ಇದಕ್ಕೆ ತಾತ್ಕಾಲಿಕ ಪರಿಹಾರ ಸಮಂಜಸವಲ್ಲ.ಹೀಗಾಗಿ ತಜ್ಞರ ಸಮಿತಿಯನ್ನು ನೇಮಿಸಿದ್ದು ಶಾಶ್ವತ ಪರಿಹಾರಕ್ಕೆ ಯೋಜನೆ ರೂಪಿಸಲಾಗುತ್ತಿದೆ,ತಾತ್ಕಾಲಿಕ ಪರಿಹಾರ ಬೇಕಾದಲ್ಲಿ ವಿಮರ್ಶೆ ನಡೆಸಿ ಪರಿಹಾರ ಕಂಡುಕೊಳ್ಳಲಾಗುವುದು.ಕೋಡಿ ಕನ್ಯಾಣ,ಹಂಗಾರಕಟ್ಟೆ, ಬೆಂಗ್ರೆ ಮೀನುಗಾರರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಇವರ ದುಃಸ್ಥಿತಿ […]

ಪರಿಸರದ ಉಳಿವಿಗಾಗಿ ಗಿಡಗಳನ್ನು ನೆಟ್ಟು ಬೆಳೆಸಬೇಕು-ಶಾಸಕ ಕೊಡ್ಗಿ

ಕುಂದಾಪುರ:ಮಂಗಳೂರು ವೃತ್ತ,ಕುಂದಾಪುರ ವಿಭಾಗ,ಶಂಕರನಾರಾಯಣ ವಲಯದ ಸಹಭಾಗಿತ್ವದಲ್ಲಿ ವನಮಹೋತ್ಸವ ಕಾರ್ಯಕ್ರಮ ಕೊಡಾಬೈಲ್ ಹೆಂಗವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿ ಪ್ರದೇಶದಲ್ಲಿ ನಡೆಯಿತು.ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿಸಸಿನೆಟ್ಟು ಮಾತನಾಡಿ ಪರಿಸರದ ಉಳಿವಿಗಾಗಿ ಗಿಡಗಳನ್ನು ಹೆಚ್ಚು ಹೆಚ್ಚು ಬೆಳೆಸಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

ಮಾದಕ ವಸ್ತು ಸೇವನೆಯಿಂದ ವಿದ್ಯಾರ್ಥಿಗಳು ಮಾನಸಿಕವಾಗಿ ಅಸ್ವಸ್ಥರಾಗುತ್ತಾರೆ

ಕುಂದಾಪುರ:ಕೆ.ಪಿ.ಎಸ್ ಕೋಟೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಯಿತು.ಎನ್.ಆರ್.ಆಚಾರ್ಯ ಆಸ್ಪತ್ರೆಯ ಖ್ಯಾತ ಮನೋವೈದ್ಯೆ ಮಹಿಮಾ ಆಚಾರ್ಯ ಮಾತನಾಡಿ, ಮಾದಕ ವಸ್ತು ಸೇವನೆಯಿಂದ ವಿದ್ಯಾರ್ಥಿಗಳು ದೈಹಿಕವಾಗಿ, ಮಾನಸಿಕವಾಗಿ ಅಸ್ವಸ್ತರಾಗುವುದು ಮಾತ್ರವಲ್ಲದೆ ಕುಟುಂಬ,ಸಮಾಜ,ದೇಶಕ್ಕೆ ಮಾರಕರಾಗುತ್ತಾರೆ ಎಂದರು.ಕಾಲೇಜಿನ ಪ್ರಿನ್ಸಿಪಾಲ್ ಸುಶೀಲ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪನ್ಯಾಸಕ ಪ್ರವೀಣ್ ಸ್ವಾಗತಿಸಿದರು,ಗಣೇಶ್ ಹೆಬ್ಬಾರ್ ನಿರ್ವಹಿಸಿದರು, ಚಂದ್ರಕಲಾ ವಂದಿಸಿದರು.

You cannot copy content of this page