ಅತಿಥಿ ಶಿಕ್ಷಕರ ನೇಮಕಕ್ಕೆ ಕ್ರಮ,ಪ್ರತಿಭಟನೆ ಕೈಬಿಟ್ಟ ಪೋಷಕರು
ಕುಂದಾಪುರ:ಕನ್ನಡ ಶಿಕ್ಷಕರನ್ನು ಹೆಚ್ಚುವರಿ ಆಧಾರದ ಮೇಲೆ ವರ್ಗಾವಣೆ ಮಾಡಿರುವುದದನ್ನು ಖಂಡಿಸಿ ಕಳೆದ ಐದು ದಿನಗಳಿಂದ ಬೈಂದೂರು ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಪಡುಕೋಣೆ ಶಾಲೆಯಲ್ಲಿ ನಡೆಯುತ್ತಿದ್ದ ಮಕ್ಕಳ ಪೋಷಕರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಪಡುಕೋಣೆ ಶಾಲೆಯಲ್ಲಿ ಬುಧುವಾರ ವಿಶೇಷ ಸಭೆ ನಡೆಯಿತು. ಡಿಡಿಪಿಐ ಗಣಪತಿ.ಕೆ ಪೋಷಕರ ಸಭೆಯನ್ನುದ್ದೇಶಿಸಿ ಮಾತನಾಡಿ ಸರಕಾರದ ನಿಯಮದ ಪ್ರಕಾರ ಶಿಕ್ಷಕರನ್ನು ವರ್ಗಾವಣೆ ಮಾಡಲಾಗಿದೆ,ಪರ್ಯಾಯವಾಗಿ ಅತಿಥಿ ಶಿಕ್ಷಕರೊಬ್ಬರನ್ನು ನೇಮಕ ಮಾಡಲು ಕ್ರಮಗಳನ್ನು ಕೈಗೊಳ್ಳಲಾಗುವುದೆಂದು ಹೇಳಿದರು.ಪೋಷಕರ ಬೇಡಿಕೆಗಳನ್ನು ಸರಕಾರಕ್ಕೆ ಸಲ್ಲಿಕೆ ಮಾಡಲಾಗುವುದೆಂದು […]





























































































































































































































































































































































































































































































































































































































































































































































































































































































































































































































































































































































































































































































































































































































































































