ಎಎನ್ ಎಫ್ ಎನ್ ಕೌಂಟರ್ ಗೆ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿ,ಮುಂದುವರಿದ ಕೂಂಬಿಂಗ್ ಕಾರ್ಯಾಚರಣೆ

ಉಡುಪಿ:ಜಿಲ್ಲೆಯ ಹೆಬ್ರಿ ತಾಲೂಕಿನ ಹೆಬ್ರಿ ಕಬ್ವಿನಾಲೆ ಸೀತಂಬೈಲುವಿನಲ್ಲಿ ಸೋಮವಾರ ರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಹತನಾಗಿದ್ದಾನೆ.ನಕ್ಸಲ್ ನಿಗ್ರಹ ದಳದಿಂದಕೂಂಬಿಂಗ್ ಕಾರ್ಯಾಚರಣೆ ಮುಂದುವರಿದಿದೆ.ಹೊಟೇಲ್ ನಲ್ಲಿ ಸಪ್ಲೇಯರ್ ಆಗಿ‌ ಕೆಲಸ ನಿರ್ವಹಿಸುತ್ತಿದ್ದ ವಿಕ್ರಂ ಗೌಡ.ನಕ್ಸಲ್ ಚಟುವಟಿಕೆಗೆ ಸೇರ್ಪಡೆಯಾಗಿದ್ದ.ಹೆಬ್ರಿ ತಾಲೂಕಿನ ಕೂಡ್ಲು ನಿವಾಸಿಯಾಗಿದ್ದಾನೆ.ನಕ್ಸಲ್ ಮುಖಂಡನಾಗಿ ಕಾರ್ಯನಿರ್ವಹಿಸುತ್ತಿದ್ದ ಎಂದು ತಿಳಿದು ಬಂದಿದೆ.ಹೆಬ್ರಿ ತಾಲೂಕಿನ ಪೀತ್‌ಬೈಲಿನಲ್ಲಿ ಎಎನ್‌ಎಫ್ ಅಧಿಕಾರಿಗಳು ಹಾಗೂ ನಕ್ಸಲ್‌‌ರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೋಸ್ಟ್ ವಾಟೆಂಡ್ […]

ವಿದ್ಯಾರಣ್ಯ ಶಾಲೆಯಲ್ಲಿ ಉಚಿತ ಎನ್. ಎಂ.ಎಂ.ಎಸ್. ಕಾರ್ಯಾಗಾರ ಉದ್ಘಾಟನೆ

ಕುಂದಾಪುರ:ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ,ಕರ್ನಾಟಕ ಪ್ರೌಢ ಶಾಲಾ ಸಹಶಿಕ್ಷಕರ ಸಂಘ ಕುಂದಾಪುರ ತಾಲೂಕು ಘಟಕ ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಯಡಾಡಿ- ಮತ್ಯಾಡಿ ಇವರ ಜಂಟಿ ಪ್ರಾಯೋಜಕತ್ವದಲ್ಲಿ ಉಚಿತ ಎನ್. ಎಂ.ಎಂ.ಎಸ್.ತರಬೇತಿ ಕಾರ್ಯಾಗಾರ ವಿದ್ಯಾರಣ್ಯ ಶಾಲೆಯಲ್ಲಿ ನಡೆಯಿತು.ಈ ಕಾರ್ಯಾಗಾರವು ವಿದ್ಯಾರಣ್ಯ ಶಾಲೆಯ ಸಹಕಾರದೊಂದಿಗೆ ಆರು ವಾರಗಳು ನಡೆಯಲಿದ್ದು ಸಂಪನ್ಮೂಲ ವ್ಯಕ್ತಿಗಳು ಮಕ್ಕಳಿಗೆ ತರಬೇತಿ ನೀಡಲಿದ್ದಾರೆ.ಎನ್. ಎಂ.ಎಂ.ಎಸ್.ಜಿಲ್ಲಾ ನೋಡೆಲ್ ಅಧಿಕಾರಿ ಚಂದ್ರ ನಾಯ್ಕ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಮಕ್ಕಳು ಕಾರ್ಯಾಗಾರದಲ್ಲಿ ಸಂಪೂರ್ಣವಾಗಿ […]

ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ,ಇಬ್ಬರು ಮಹಿಳೆಯರಿಗೆ ಗಾಯ

ಮುಳ್ಳಿಕಟ್ಟೆ:ಕುಂದಾಪುರ ದಿಂದ ಅರಾಟೆಗೆ ಸಾಗುತ್ತಿದ್ದ ಆಟೋ ರಿಕ್ಷಾಕ್ಕೆ ಮುಳ್ಳಿಕಟ್ಟೆ ಸರ್ಕಲ್ ನಲ್ಲಿ ತ್ರಾಸಿ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ಮಹಿಳೆಯರಿಬ್ಬರಿಗೆ ಗಾಯವಾಗಿದ್ದು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಘಟನೆ ಗುರುವಾರ ನಡೆದಿದೆ. ಅನಾರೋಗ್ಯದ ನಿಮಿತ್ತ ಆಟೋದಲ್ಲಿ ಕುಂದಾಪುರ ಖಾಸಗಿ ಆಸ್ಪತ್ರೆಗೆ ತೆರಳಿ ಡಾಕ್ಟರ್ ರಿಂದ ಪರೀಕ್ಷೆ ಮಾಡಿಸಿಕೊಂಡು ಮನೆಗೆ ಮರಳಿ ರಿಕ್ಷಾದಲ್ಲಿ ತೆರಳುತ್ತಿದ್ದ ಸಮಯದಲ್ಲಿ ಮುಳ್ಳಿಕಟ್ಟೆ ಸರ್ಕಲ್ ನಲ್ಲಿ ಆಟೋ ಚಾಲಕ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಯೂರ್ಟನ್ ತೆಗೆದು ಕೊಂಡು […]

You cannot copy content of this page