ಡಿಸೆಂಬರ್ 09 ರಂದು ನವಚೇತನ ಸಮಾವೇಶ, ಕುಂದಾಪುರ ತಾಲೂಕು ಸಮಿತಿ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಕುಂದಾಪುರ:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿ ಉಡುಪಿ ವತಿಯಿಂದ ನವಚೇತನ ಸಮಾವೇಶ ಹಾಗೂ ಕುಂದಾಪುರ ತಾಲೂಕು ಸಮಿತಿ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಡಿಸೆಂಬರ್.09 ರಂದು ಸೋಮವಾರ ಅಂಬೇಡ್ಕರ್ ಭವನ ಕುಂದಾಪುರದಲ್ಲಿ ನಡೆಯಲಿದೆ.ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ತರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು.ಜಿಲ್ಲಾ ಸಂಘಟನಾ ಸಂಚಾಲಕ ಶ್ಯಾಮಸುಂದರ್ ತೆಕ್ಕಟ್ಟೆ ಅಧ್ಯಕ್ಷತೆ ವಹಿಸಲಿದ್ದು,ಅಂಬೇಡ್ಕರ್ ಅವರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಲಿದ್ದಾರೆ.ಜಿಲ್ಲಾ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ.ಕುಂದಾಪುರ ಉಪ ವಿಭಾಗಾಧಿಕಾರಿ ಮಹೇಶ್ಚಂದ್ರ, […]

ನೀಲಾವರದಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

ಉಡುಪಿ:ನೀಲಾವರದಲ್ಲಿ ಮನೆಗೆ ಸಿಡಿಲು ಬಡಿದ ಪರಿಣಾಮ ಮನೆಯಲ್ಲಿನ ಎಲೆಕ್ಟ್ರಾನಿಕ್ ಉಪಕರಣಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿ ಹೋಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.ಸಿಡಿಲಿನ ಹೊಡೆತಕ್ಕೆ ಮನೆ ಗೋಡೆ ಬಿರುಕು ಬಿಟ್ಟಿದೆ.ಮೀಟರ್ ಬೋರ್ಡ್ ಕೆಳಗೆ ಕಳಚಿ ಬಿದ್ದಿದೆ.

ಮಂಗಳೂರಿನಲ್ಲಿ ಭಾರಿ ಮಳೆ,ಕೃತಕ ನೆರೆ ಸೃಷ್ಟಿ,ವ್ಯಾಪಕ ಹಾನಿ‌

ಮಂಗಳೂರು:ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯಲ್ಲಿ ಸೋಮವಾರ ಭಾರಿ ಮಳೆಯಾಗಿದೆ.ಹವಾಮಾನ ವೈಪರಿತ್ಯ ದಿಂದಾಗಿ ಏಕಾಏಕಿ ಸುರಿದ ವರುಣನ ಅಬ್ಬರಕ್ಕೆ ಜಿಲ್ಲೆಯ ಜನತೆ ತತ್ತರಿಸುವಂತಾಗಿದೆ. ಗುಡುಗು,ಸಿಡಿಲು ಸಹಿತ ಮಳೆ ಧಾರಾಕಾರವಾಗಿ ಸುರಿದಿದ್ದು, ಕೆಲವೆಡೆ ವಿದ್ಯುತ್ ವ್ಯತ್ಯಯವಾಗಿತ್ತು.ಗಾಳಿಮಳೆಗೆ ಹಲವು ಮರಗಳು ಧರೆಗುರುಳಿವೆ.ಮಳೆಯ ಅಬ್ಬರ ಜೋರಿರುವುದರಿಂದ ಡಿ. 3 ರಂದು ಜಿಲ್ಲೆಯಲ್ಲಿ ಶಾಲಾ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮ ವಹಿಸುವಂತೆ ಜಿಲ್ಲಾಡಳಿತಸೂಚಿಸಿದೆ.ಟಿಪ್ಪು ಸುರತ್ಕಲ್ ಮಾರುಕಟ್ಟೆ ಬಳಿಯ ವೀನಸ್ ಅಸ್ಪತ್ರೆಗೆ ಪ್ರವೇಶಿಸಿದ‌ ನೆರೆ ನೀರಿನಿಂದಾಗಿ,ರೋಗಿಗಳ ಪರದಾಟ ಮಾಡುವಂತ್ತಾಯಿತು.

You cannot copy content of this page