ಸೆ.10 ರಂದು ಕಟ್‍ಬೇಲ್ತೂರು ಪಂಚಾಯಿತಿ ಜಮಾಬಂದಿ

ಕುಂದಾಪುರ:ತಾಲೂಕಿನ ಕಟ್‍ಬೇಲ್ತೂರು ಗ್ರಾಮ ಪಂಚಾಯಿತಿಯ 2023-24ನೇ ಸಾಲಿನ ಜಮಾ ಬಂದಿ ಸೆ.10 ರ ಮಂಗಳ ವಾರದಂದು ಪೂರ್ವಾಹ್ನ 10 ಗಂಟೆಗೆ ಕಟ್‍ಬೇಲ್ತೂರು ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಜರುಗಲಿದೆ.ಸಹಾಯಕ ನಿರ್ದೇಶಕರು ಅಕ್ಷರ ದಾಸೋಹ ತಾಲೂಕು ಪಂಚಾಯಿತಿ ಕುಂದಾಪುರ ಅರುಣ್ ಕುಮಾರ್ ಶೆಟ್ಟಿ ಜಮಾಬಂದಿ ಅಧಿಕಾರಿಯಾಗಿ ಭಾಗವಹಿಸಲಿದ್ದಾರೆ.

ಓಂ ಗಣೇಶ ಯುವಕ ಸಂಘ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಳ್ವೆಗದ್ದೆ ಶಿರೂರು

ಕುಂದಾಪುರ:ಓಂ ಗಣೇಶ ಯುವಕ ಸಂಘ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಳ್ವೆಗದ್ದೆ ಶಿರೂರು ವತಿಯಿಂದ 20ನೇ ವರ್ಷದ ಶ್ರೀ ಗಣೇಶೋತ್ಸವ ಕಾರ್ಯಕ್ರಮ ಅಳ್ವೆಗದ್ದೆ ಶ್ರೀಮಹಾಗಣಪತಿ ಸಭಾಭವನದಲ್ಲಿ ವಿಜೃಂಭಣೆಯಿಂದ ಶನಿವಾರ ನಡೆಯಿತು.ಶ್ರೀಗಣೇಶ ಚತುರ್ಥಿ ಕಾರ್ಯಕ್ರಮದ ಅಂಗವಾಗಿ ಶ್ರೀಗಣಪತಿ ದೇವರಿಗೆ ಗಣಹೋಮ,ಮಹಾಪೂಜೆ,ಮಂಗಳಾರತಿ ಸೇವೆಯನ್ನು ಸಲ್ಲಿಸಲಾಯಿತು.ಭಜನಾ ಕಾರ್ಯಕ್ರಮ,ಭಕ್ತಿ ರಸಮಂಜರಿ ಕಾರ್ಯಕ್ರಮ,ಅನ್ನದಾನ ಸೇವೆ,ಸಾಮೂಹಿಕ ಸತ್ಯನಾರಾಯಣ ಪೂಜೆ,ರಾರಾ ಮೆಲೋಡಿಸ್ ತಂಡವರಿಂದ ಭಕ್ತಿ ರಸಮಂಜರಿ ಕಾರ್ಯಕ್ರಮ ಜರುಗಿತು.ಭವ್ಯ ಮೆರವಣಿಗೆ ಮೂಲಕ ಶ್ರೀಗಣೇಶ ವಿಗ್ರಹವನ್ನು ಜಲಸ್ತಂಭ ಮಾಡಲಾಯಿತು.ಓಂ ಗಣೇಶ ಯುವಕ ಸಂಘ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ […]

ಮರವಂತೆ ಮಹಾರಾಜ ಸ್ವಾಮಿ ಶ್ರೀ ವರಾಹ ದೇವರಿಗೆ ಬೆಳ್ಳಿ ರಥ ಸಮರ್ಪಣೆ

ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಮರವಂತೆ ಮಹಾರಾಜ ಸ್ವಾಮಿ ಶ್ರೀ ವರಾಹ ದೇವರಿಗೆ ಬೆಳ್ಳಿ ರಥವನ್ನು ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಭಾನುವಾರ ಸಮರ್ಪಣೆ ಮಾಡಲಾಯಿತು.ಬೆಳ್ಳಿರಥ ಸಮರ್ಪಣೆ ಕಾರ್ಯಕ್ರಮದ ಅಂಗವಾಗಿ ಶ್ರೀ ದೇವರಿಗೆ ಹೂವಿನ ಅಲಂಕಾರ ಪೂಜೆ,ಹಣ್ಣುಕಾಯಿ ಮತ್ತು ಮಂಗಳಾರತಿ ಸೇವೆ ಹಾಗೂ ಅನ್ನದಾನ ಸೇವೆಯನ್ನು ಸಲ್ಲಿಸಲಾಯಿತು. ಸಹಸ್ರಾರು ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಶ್ರೀದೇವರ ದರ್ಶನ ಪಡೆದರು.ಬೆಳ್ಳಿ ರಥ ಬೃಹತ್ ಪುರಮೆರವಣಿಗೆ ಶ್ರೀರಾಮ ದೇವಸ್ಥಾನದಿಂದ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದ ವರೆಗೆ ವಿಜೃಂಭಣೆಯಿಂದ ನಡೆಯಿತು.ಶ್ರೀ ರಾಮ ದೇವರಿಗೆ […]

You cannot copy content of this page