ಕಾಡಾನೆಗಳ ದಾಳಿಗೆ-ಅಡಿಕೆ ಗಿಡ ನಾಶ,ಸಾವಿರಾರು ರೂಪಾಯಿ ನಷ್ಟ

ಮಂಗಳೂರು:ತೋಟಕ್ಕೆ ನುಗ್ಗಿದ ಕಾಡಾನೆಗಳು ಅಡಿಕೆ ಗಿಡಗಳನ್ನು ನಾಶಪಡಿಸಿರುವ ಘಟನೆ ಕಡಬ ತಾಲೂಕಿನ ಶಿರಾಡಿ ಗ್ರಾಮದಲ್ಲಿ ನಡೆದಿದೆ.ಶಿರಾಡಿ ಗ್ರಾಮದ ತೆಕ್ಕನಾಟ್ ನಿವಾಸಿ ಟಿ.ಎ.ತೋಮಸ್ ಎಂಬವರಿಗೆ ಸೇರಿದ ಅಡಿಕೆ ತೋಟಕ್ಕೆ ನ.24 ರ ಮಧ್ಯರಾತ್ರಿ ಕಾಡಾನೆಗಳ ಗುಂಪು ದಾಳಿ ನಡೆಸಿದ್ದು ೧೦೦ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ನಾಶಗೊಳಿಸಿವೆ.ಶಿರಾಡಿ ಗ್ರಾಮದ ಇತರೇ ಕಡೆಯೂ ಕೃಷಿ ತೋಟಕ್ಕೆ ಕಾಡಾನೆಗಳು ದಾಳಿ ಮಾಡಿದ್ದು ಅಡಿಕೆ, ಬಾಳೆ ಕೃಷಿ ನಾಶಗೊಳಿಸಿವೆ. ಕಾಡಾನೆಗಳನ್ನು ಸ್ಥಳಾಂತರಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

71ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಕಾರ್ಯಕ್ರಮ

ಕುಂದಾಪುರ:ಶ್ರೀ ಗಣೇಶ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮುಳ್ಳಿಕಟ್ಟೆ-ಹೊಸಾಡು ಶಾಖೆ ವತಿಯಿಂದ 71ನೇ ಸಹಕಾರ ಸಪ್ತಾಹ ಸಮಾರೋಪ ಕಾರ್ಯಕ್ರಮ ದಿ.ಜಿಎಸ್ ಆಚಾರ್ಯ ಸ್ಮಾರಕ ಸಭಾಭವನ ಮುಳ್ಳಿಕಟ್ಟೆಯಲ್ಲಿ ಬುಧವಾರ ನಡೆಯಿತು.ಸಹಕಾರ ಸಂಘಗಳ ನಿವೃತ್ತ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ ಅವರು ಸಹಕಾರ ಕಾಯಿದೆ,ನಿಯಮಗಳ ಬಗ್ಗೆ ಹಾಗೂ ಸಹಕಾರಿ ಸಪ್ತಾಹ ಆಚರಣೆಯ ಉದ್ದೇಶದ ಕುರಿತು ಮಾಹಿತಿಯನ್ನು ನೀಡಿದರು. ಸಂಘದ ಅಧ್ಯಕ್ಷ ಮುರಳೀಧರ ಐತಾಳ್ ಅಧ್ಯಕ್ಷತೆ ವಹಿಸಿದ್ದರು.ಸಂಘದ ಸಲಹೆಗಾರ ಡಿ.ಎಂ ಕಾರಂತ ಮತ್ತು ಎಲ್ಲಾ ನಿರ್ದೇಶಕರು,ನಿವೃತ್ತ ನೌಕರರ ಸಂಘದ ಅಧ್ಯಕ್ಷ […]

ರವಿ ಖಾರ್ವಿಗೆ ದೇಶದ ಅತ್ಯುತ್ತಮ ಸಮುದ್ರ ಮೀನು ಕೃಷಿಕ ಪ್ರಶಸ್ತಿ

ಕುಂದಾಪುರ:ಕೇಂದ್ರೀಯ ಸಮುದ್ರ ಮೀನುಗಾರಿಕಾ ಸಂಶೋಧನಾ ಸಂಸ್ಥೆ(ಐಸಿಎಆರ್- ಸಿಎಂಎಫ್‍ಆರ್‍ಐ) ಮಂಗಳೂರು ಪ್ರಾದೇಶಿಕ ಕೇಂದ್ರ ಕರ್ನಾಟಕ ದಿಂದ ತರಬೇತಿ ಪಡೆದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತಲ್ಲೂರು ಗ್ರಾಮದ ಪ್ರಗತಿಪರ ಮೀನು ಕೃಷಿಕ ರವಿ ಖಾರ್ವಿ,ಭಾರತ ಸರಕಾರದ ಮೀನುಗಾರಿಕೆ,ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯ ನೀಡುವ ಅತ್ಯುತ್ತಮ ಸಮುದ್ರ ಮೀನು ಕೃಷಿಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.ನವದೆಹಲಿಯಲ್ಲಿ ಗುರುವಾರ ನಡೆದ ವಿಶ್ವ ಮೀನುಗಾರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಕೇಂದ್ರ ಮೀನುಗಾರಿಕಾ ಸಚಿವ ರಾಜೀವ್ ರಂಜನ್ ಸಿಂಗ್ ಅವರಿಂದ ರವಿ ಖಾರ್ವಿ ಅವರು ಪ್ರಶಸ್ತಿ ಪತ್ರ ಸಹಿತ […]

You cannot copy content of this page