ಡಾನ್ ಬಾಸ್ಕೊ ರಜತ ಮಹೋತ್ಸವ ಸಂಭ್ರಮಕ್ಕೆ ಚಾಲನೆ,ರಜತ ಲೋಗೋ ಬಿಡುಗಡೆ

ಕುಂದಾಪುರ:2000 ಇಸವಿಯಲ್ಲಿ ಆರಂಭಗೊಂಡಿರುವ ಡಾನ್ ಬಾಸ್ಕೊ ತ್ರಾಸಿ-ಹೊಸಾಡು ಸಂಸ್ಥೆಗೆ 25 ವರ್ಷ ತುಂಬಿರುವುದರಿಂದ ಸಂಸ್ಥೆಯ ರಜತ ಮಹೋತ್ಸವ ಕಾರ್ಯಕ್ರಮವನ್ನು ಸ್ಮರಣೀಯವಾಗಿ ಆಚರಿಸುವ ಉದ್ದೇಶದಿಂದ ರಜತ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಗಿದೆ.ಇವೊಂದು ಸುಸಂದರ್ಭದಲ್ಲಿ ರಜತ ಮಹೋತ್ಸವ ವರ್ಷಾಚರಣೆ ಅಂಗವಾಗಿ ಶೈಕ್ಷಣಿಕ,ಸಾಂಸ್ಕೃತಿಕ,ಕ್ರೀಡೆ,ಸಾಮಾಜಿಕ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು.ಒಂದು ವರ್ಷಗಳ ಕಾಲ ನಿರಂತರವಾಗಿ ಕಾರ್ಯಕ್ರಮಗಳು ನಡೆಯುತ್ತವೆ.2025 ರ ಡಿಸೆಂಬರ್ ತಿಂಗಳಿನಲ್ಲಿ ರಜತ ಮಹೋತ್ಸವ ಕಾರ್ಯಕ್ರಮ ಸಂಪನ್ನವಾಗಲಿರುವ ಹಿನ್ನೆಲೆಯಲ್ಲಿ ಅದ್ದೂರಿಯಾಗಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲು ಆಲೋಚನೆಗಳನ್ನು ಹಾಕಿಕೊಳ್ಳಲಾಗಿದೆ ಎಂದು ಡಾನ್ ಬಾಸ್ಕೊ ಶಾಲೆಯ […]

ವಿಶ್ವ ಪ್ರಸಿದ್ಧ ತ್ರಾಸಿ-ಮರವಂತೆ ಬೀಚ್‍ನಲ್ಲಿ ಸ್ಕೈ ಡೈನಿಂಗ್ ಉದ್ಘಾಟನೆ

ಕುಂದಾಪುರ:ವಿಶ್ವ ಪ್ರಸಿದ್ಧ ತ್ರಾಸಿ ಮರವಂತೆ ಬೀಚ್‍ನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸ್ಕೈ ಡೈನಿಂಗ್ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ನಡೆಯಿತು.ಧಾರ್ಮಿಕ ಪೂಜಾ ಕಾರ್ಯಗಳನ್ನು ಮಾಡಲಾಯಿತು.ಸಮುದ್ರ ಮಟ್ಟದಿಂದ ಸುಮಾರು 90 ರಿಂದ 100 ಮೀಟರ್ ಎತ್ತರದಲ್ಲಿ ಕುಳಿತು ಕಡಲ ಸೌಂದರ್ಯವನ್ನು ಕಣ್ತುಂಬಿಕೊಳ್ಳುತ್ತಾ,ರಾಷ್ಟ್ರೀಯ ಹೆದ್ದಾರಿ ನೋಟ,ಸೌಪರ್ಣಿಕಾ ನದಿಯ ಸೌಂದರ್ಯ ನೋಡುತ್ತಾ ನಿಮಿಷ್ಟದ ಖಾದ್ಯವನ್ನು ಸವಿಯಬಹುದು.ಟೀಮ್ ಮಂತ್ರಾಸ್ ಅವರು ಆಯೋಜನೆ ಮಾಡಿರುವ ಸ್ಕೈ ಡೈನಿಂಗ್ ಕರ್ನಾಟಕದ ಎರಡನೇ ತಾಣವಾಗಿದ್ದು ಒಂದು ಬಾರಿ 12 ಜನ ಸ್ಕೈಡೈನಿಂಗ್‍ನಲ್ಲಿ ಕುಳಿತು ಪ್ರಕೃತಿ ಸೌಂದರ್ಯವನ್ನು ಆಸ್ವಾದಿಸ ಬಹುದಾಗಿದೆ .ಬೇರೆ […]

ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಮಹಿಳಾ ಆರೋಗ್ಯ ಮತ್ತು ನೈರ್ಮಲ್ಯ ಜಾಗೃತಿ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ಮಹಿಳಾ ಕುಂದು ಕೊರತೆ ಪರಿಹಾರ ಸಮಿತಿಯಿಂದ ಕಾರ್ಯಕ್ರಮ ಜರುಗಿತು.ಸಂಪನ್ಮೂಲ ವ್ಯಕ್ತಿ ಡಾ. ದೀಕ್ಷಿತಾ ಸ್ತ್ರೀ ರೋಗ ತಜ್ಞರು ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರ ಇವರು ಮಾತನಾಡಿ, ವಿದ್ಯಾರ್ಥಿನಿಯನಿಯರಿಗೆ ಕಲಿಕೆಯ ಜೊತೆಗೆ ಅವರ ವೈಯಕ್ತಿಕ ಆರೋಗ್ಯ , ವೈಯಕ್ತಿಕ ಕಾಳಜಿ,ಸ್ವಚ್ಛತೆ ಮುಖ್ಯ ಈ ಕುರಿತು ಮಾಹಿತಿ ಹಾಗೂ ವಿವಿಧ ಪರಿಹಾರ ನೀಡಿದರು.ಶಿಕ್ಷಣ ಸಂಸ್ಥೆ ಸಂಸ್ಥಾಪಕರಾದ ಸುಬ್ರಮಣ್ಯ ,ಕಾಲೇಜಿನ ನಿರ್ದೇಶಕಿ ಮಮತಾ ವೈಸ್ ಪ್ರಿನ್ಸಿಪಾಲ್ ಸುಜಾತ ಹಾಗೂ ಮಹಿಳಾ ಕುಂದು ಕೊರತೆ ಪರಿಹಾರ […]

You cannot copy content of this page