ಕೆರ್ಗಾಲ್ ಶ್ರೀ ವನದುರ್ಗಾದೇವಿ ದೇವಸ್ಥಾನದಲ್ಲಿ ವಿಜಯದಶಮಿ ಸಂಭ್ರಮೋತ್ಸವ

ಕುಂದಾಪುರ:ಬೈಂದೂರ ತಾಲೂಕಿನ ಕೆರ್ಗಾಲ್ ನಾಯ್ಕನಕಟ್ಟೆ ಬನಗಲ್ ಹಾಡಿ ಶ್ರೀ ವನದುರ್ಗಾದೇವಿ ದೇವಸ್ಥಾನದಲ್ಲಿ ವಿಜಯದಶಮಿ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಶನಿವಾರ ನಡೆಯಿತು.ವೇದ ಮೂರ್ತಿ ಕೊರ್ಗಿ ನಾಗೇಶ್ವರ ಮಂಜರು ಮತ್ತು ರಾಘವೇಂದ್ರ ಕಾರಂತರ ಅವರ ಆಚಾರ್ಯತ್ವದಲ್ಲಿಶರನ್ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ದೇವಿ ಸನ್ನಿಧಾನದಲ್ಲಿ ಚಂಡಿಕಾ ಹೋಮ,ದುರ್ಗಾಹೋಮ,ಮಹಾಮಂಗಳಾರತಿ,ಹಣ್ಣುಕಾಯಿ ಸೇವೆ,ಅನ್ನದಾನ ಸೇವೆ ಜರುಗಿತು.ಭಕ್ತಾದಿಗಳು,ಗ್ರಾಮಸ್ಥರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಶ್ರೀ ದೇವಿಯ ಪ್ರಾಸದವನ್ನು ಸ್ವೀಕರಿಸಿದರು.ಮಕ್ಕಳು,ಪುರುಷರು ಮತ್ತು ಮಹಿಳೆಯರಿಗಾಗಿ ಆಟೋಟ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಭಜನಾ ಕಾರ್ಯಕ್ರಮ ಜರುಗಿತು.ದೇವಸ್ಥಾನದ ಅಧ್ಯಕ್ಷರಾದ ಉದ್ಯಮಿ […]

ಮುಳ್ಳಿಕಟ್ಟೆಯಲ್ಲಿ ಜಯಮಾಹಲ ವಾಣಿಜ್ಯ ಸಂಕೀರ್ಣ ಶೀಘೃದಲ್ಲೆ ಶುಭಾರಭ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಹೊಸಾಡು ಶಾಲೆ ಸಮೀಪ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಯಶೋಧ ಜಗದೀಶ್ ಮೊಗವೀರ ಬಟ್ಟೆಕುದ್ರು ಅವರ ಮಾಲೀಕತ್ವದ ಜಯಮಾಹಲ ಕಛೇರಿ ಉದ್ಘಾಟನಾ ಕಾರ್ಯಕ್ರಮ ವಿಜಯದಶಮಿ ಶುಭ ಸಂದರ್ಭದಲ್ಲಿ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶನಿವಾರ ಮಾಡಲಾಯಿತು.ಈ ಸಂದರ್ಭದಲ್ಲಿ ಜಯಮಾಲ ವಾಣಿಜ್ಯ ಸಂಕೀರ್ಣದ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಯಿತು.ಉದ್ಯಮ ಕ್ಷೇತ್ರದಲ್ಲಿ ಸುಮಾರು 38 ವರ್ಷಗಳ ಅನುಭವವನ್ನು ಹೊಂದಿರುವ ಯಶೋಧ ಜಗದೀಶ್ ಮೊಗವೀರ ಅವರು ತಮ್ಮ ಕಷ್ಟದ ದಿನಗಳ ನಡುವೆ ಬೆಂಗಳೂರಿಗೆ ಪಯಣಿಸಿ ಅಲ್ಲಿ ಜೀವನವನ್ನು ಕಟ್ಟಿಕೊಂಡು […]

ಸಪ್ತಸ್ವರ ವಿವಿಧೋದ್ದೇಶ ಸಹಕಾರಿ ಸಂಘ ತಲ್ಲೂರು, ವಿದ್ಯಾರ್ಥಿ ವೇತನ ವಿತರಣೆ

ಕುಂದಾಪುರ:ಸಪ್ತಸ್ವರ ವಿವಿಧೋದ್ದೇಶ ಸಹಕಾರಿ ಸಂಘ ತಲ್ಲೂರು ವತಿಯಿಂದ ಸಂಘದ ಎ ಕ್ಲಾಸ್ ಸದಸ್ಯರ ಮಕ್ಕಳಿಗೆ ಮತ್ತು ಸ್ವರಸಿಂಚನ ಸ್ವಸಹಾಯ ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಅಕ್ಟೋಬರ್ 13 ಭಾನುವಾರ ಬೆಳಿಗ್ಗೆ ಸಂಘದ ಪ್ರಧಾನ ಕಚೇರಿಯಲ್ಲಿ ನಡೆಯಲಿದೆ.ಸಂಘದ ಅಧ್ಯಕ್ಷ ಚಂದ್ರ ದೇವಾಡಿಗ ಅಧ್ಯಕ್ಷತೆ ವಹಿಸಲಿದ್ದಾರೆ.ನಿವೃತ ಕ್ಯಾಪ್ಟನ್ ಭಾರತೀಯ ಸೇನೆ ರಾಜೇಶ್ ದೇವಾಡಿಗ ಅವರನ್ನು ಸಂಘದ ವತಿಯಿಂದ ಸನ್ಮಾನಮಾಡಲಿದ್ದು, ಮಹಾಲಿಂಗ ದೇವಾಡಿಗ, ಸಹಕಾರಿ ಸಂಘಗಳ ನಿವೃತ್ತ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ,ಸಹಕಾರಿ ಸಂಘಗಳ ಸಹಾಯಕ […]

You cannot copy content of this page