ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಶಾಲೆಯಲ್ಲಿ ವೈಭವದ ಕ್ರೀಡಾ ಕೂಟ ಉದ್ಘಾಟನೆ
ಕುಂದಾಪುರ:ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಯಡಾಡಿ- ಮತ್ಯಾಡಿ ಅದರ ವಾರ್ಷಿಕ ಕ್ರೀಡಾ ಕೂಟವು ಕುಂದಾಪುರ ಗಾಂಧಿ ಮೈದಾನದಲ್ಲಿ ಅದ್ದೂರಿಯಾಗಿ ನಡೆಯಿತು.ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಲೋಕ ಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಯವರು” ಸಾಧನೆಯಲ್ಲಿ ಛಲವಿದ್ದವರಿಗೆ ಯಾವುದೂ ಹಿನ್ನಡೆಯಾಗುವುದಿಲ್ಲ.ನಿರ್ದಿಷ್ಟವಾದ ಗುರಿ ಉದ್ದೇಶದಿಂದ ಸ್ಪಷ್ಟವಾದ ದಾರಿಯಲ್ಲಿ ಸಾಗಿದಾಗ ಯಶಸ್ಸು ಖಂಡಿತ ಸಿಗುತ್ತದೆ.ಕ್ರೀಡಾ ಕ್ಷೇತ್ರದಲ್ಲಿ ಸೋಲು ಮತ್ತು ಗೆಲುವು ಸಾಮಾನ್ಯ.ಅವೆರಡನ್ನೂ ಸಮಾನವಾಗಿ ಸ್ವೀಕರಿಸಿ ನಿರಂತರ ಪ್ರಯತ್ನ ಮಾಡಬೇಕು.ಕ್ರೀಡಾ ಕ್ಷೇತ್ರದಲ್ಲಿ […]





























































































































































































































































































































































































































































































































































































































































































































































































































































































































































































































































































































































































































































































































































































































































































