ಕಾಂಗ್ರೆಸ್ ಪಕ್ಷದ ಮುಖಂಡ ಸೀತಾರಾಮ ಶೆಟ್ಟಿ ಕೇರಿಕೊಡ್ಲು ನಿಧನ
ಕುಂದಾಪುರ-ಕಾಂಗ್ರೆಸ್ ಪಕ್ಷದ ಮುಖಂಡರಾದ ಹೊಸಾಡು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಕೇರಿಕೊಡ್ಲು ನಿವಾಸಿ ಸೀತಾರಾಮ ಶೆಟ್ಟಿ (65) ಅವರು ಅಲ್ಪಕಾಲಿಕ ಅನಾರೋಗ್ಯದಿಂದ ಮಂಗಳವಾರ ನಿಧನರಾದರು.ಅವರು ಪತ್ನಿ,ಪುತ್ರ,ಪುತ್ರಿ ಮತ್ತು ಸಹೋದರ,ಸಹೋದರಿ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.ಸುದೀರ್ಘ ನಲವತ್ತಕ್ಕೂ ಹೆಚ್ಚಿನ ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದ ಮುಖಂಡರಾಗಿ ಸೇವೆ ಸಲ್ಲಿಸಿದ್ದ ಅವರು ಮೂರು ಬಾರಿ ಗ್ರಾಮ ಪಂಚಾಯಿತಿ ಸದಸ್ಯರಾಗಿ, ಸಾಮಾಜಿಕ ಹಾಗೂ ಧಾರ್ಮಿಕ ಕೆಲಸದಲ್ಲಿ ತೊಡಗಿ ಕೊಂಡಿದ್ದು ಜನಪ್ರಿಯತೆ ಪಡೆದಿದ್ದರು.ಅಂಬಾ ಕ್ರಿಕೆಟ್ ಕ್ಲಬ್ ತಂಡದ ಸ್ಥಾಪಕ […]





























































































































































































































































































































































































































































































































































































































































































































































































































































































































































































































































































































































































































































































































































































































































































