ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ಯುವ ಮೋರ್ಚಾ ವತಿಯಿಂದ ಗಂಗೊಳ್ಳಿ ಠಾಣೆ ಪಿಎಸ್‍ಐ ಪವನ್ ನಾಯ್ಕ್ ಅವರಿಗೆ ಸೋಮವಾರ ದೂರನ್ನು ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ತ್ರಾಸಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವೀಂದ್ರ ಖಾರ್ವಿ ಹೊಸಪೇ ಟೆ,ಬೈಂದೂರು ಬಿಜೆಪಿ ಸಾಮಾಜಿಕ ಜಾಲಾತಾಣ ಸಂಚಾಲಕ ರಾಜೇಶ್ ರಾಮಣ್ಣ ನಾರ್ಕಳಿ,ಯುವ ಮೋರ್ಚಾ ಅಧ್ಯಕ್ಷ ಗಜೇಂದ್ರ ಎಸ್ […]

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ.ಎಂದು ತಿಳಿದು ಬಂದಿದೆ.ಸುಬ್ರಹ್ಮಣ್ಯ ಸಮೀಪದ ನಡುಗಲ್ಲು ಕಲ್ಲಾಜೆಯ ಜಯಲಕ್ಷ್ಮಿ ಎಂಬವರ ಪುತ್ರ ನಂದನ ಎಸ್. ಭಟ್ (25) ಮೃತರು.ನಂದನ ಅವರು ಮಾರಿಷಸ್ ದೇಶದಲ್ಲಿ ವಿದ್ಯಾರ್ಥಿ ವೀಸಾದಲ್ಲಿದ್ದು ಅಲ್ಲಿ ಜಲಪಾತ ವೀಕ್ಷಣೆಗೆ ಹೋಗಿದ್ದ ವೇಳೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಮೃತದೇಹವನ್ನು ಅಲ್ಲಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ.ಘಟನೆ ಸೋಮವಾರ ನಡೆದಿದೆ ಎನ್ನಲಾಗಿದ್ದು,ಮೃತದೇಹವನ್ನು ಅಲ್ಲಿನ […]

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ ಅಲೆಗಳ ಸೆಳೆತಕ್ಕೆ ಸಿಲುಕಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಮಂಗಳವಾರ ನಡೆದಿದೆ.ದುರ್ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಪಾರಾಗಿದ್ದಾನೆ.ಹೊಸಹಿತ್ಲು ನುಕ್ಕಿತಾರು ಉದಯ ದೇವಾಡಿಗ ಅವರ ಪುತ್ರ ಆಶಿಶ್ ದೇವಾಡಿಗ,ಹೊಸಹಿತ್ಲು ನುಕ್ಕಿತಾರು ಮಾರುತಿ ಪೂಜಾರಿ ಅವರ ಪುತ್ರ ಸೂರಜ್ ಪೂಜಾರಿ,ಹೊಸಹಿತ್ಲು ನುಕ್ಕಿತಾರು ಸುದಾಕರ ದೇವಾಡಿಗ ಅವರ ಪುತ್ರ ಸಂಕೇತ್ ದೇವಾಡಿಗ ಮೃತಪಟ್ಟಿರುವ ವಿದ್ಯಾರ್ಥಿಗಳಾಗಿದ್ದಾರೆ.ಮಂಗಳವಾರ 5.30 ರ ಸುಮಾರಿಗೆ ನಾಲ್ವರು […]

You cannot copy content of this page