ಬಂಟರ ಯಾನೆ ನಾಡವರ ಸಂಘ ಬೈಂದೂರು 30 ಸಂಭ್ರಮ
ಬೈಂದೂರು:ಬಂಟರ ಯಾನೆ ನಾಡವರ ಸಂಘ ಬೈಂದೂರು ಅದರ 30 ರ ಸಂಭ್ರಮ ಕಾರ್ಯಕ್ರಮ ಹೆಮ್ಮಾಡಿ ಜಯಶ್ರೀ ಸಭಾಭವನದಲ್ಲಿ ಭಾನುವಾರ ನಡೆಯಿತು.ಕಾರ್ಯಕ್ರಮದ ಅಂಗವಾಗಿ ಗಣಹೋಮವನ್ನು ನೆರವೇರಿಸಲಾಯಿತು.ಭವ್ಯ ಮೆರವಣಿಗೆ ಮೂಲಕ ಅತಿಥಿಗಳನ್ನು ಚಂಡೆವಾದನ ದೊಂದಿಗೆ ಬರಮಾಡಿಕೊಳ್ಳಲಾಯಿತು.ವಿವಿಧ ತಂಡಗಳಿಂದ ಭಜನಾ ಸ್ಪರ್ಧೆ ಕಾರ್ಯಕ್ರಮ ಜರುಗಿತು.ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ,ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿವೇತನ ವಿತರಿಸಲಾಯಿತು.ಭಜನ ಸ್ಪರ್ಧೆಯಲ್ಲಿ ಸ್ಪರ್ಧಿಸಿದ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು.ಸಾಧಕರನ್ನು ಗೌರವಿಸಲಾಯಿತು.ಶ್ರೀ ಮಹಾಲಿಂಗೇಶ್ವರ ದೇಸ್ಥಾನ ಬಸ್ರೂರು ಆಡಳಿತ ಧರ್ಮದರ್ಶಿ ಅಪ್ಪಣ್ಣ ಹೆಗ್ಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಸಂಘಗಳನ್ನು ರಚಿಸಿಕೊಳ್ಳುವುದರ ಮುಖೇನ ಸಮುದಾಯದ […]























































































































































































































































































































































































































































































































































































































































































































































































































































































































































































































































































































































































































































































































































































































































































