ಹೆಬ್ರಿಯಲ್ಲಿ ಮೇಘ ಸ್ಪೋಟ:ಹಠಾತ್ ಜಲ ಪ್ರವಾಹದಿಂದ ಮನೆ,ಕೃಷಿ ಭೂಮಿಗೆ ನುಗ್ಗಿದ ನೀರು

ಉಡುಪಿ:ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದಲ್ಲಿ ಬಲ್ಲಾಡಿಯಲ್ಲಿ ಏಕಾಏಕಿ ಸುರಿದ ಭಾರಿ ಮಳೆಗೆ ಹಠಾತ್ ಪ್ರವಾಹ ಉಂಟಾಗಿ ಮನೆ ಮಠ,ಕೃಷಿ ಭೂಮಿಗೆ ನುಗ್ಗಿದ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.ಜಲ ಪ್ರವಾಹದಿಂದಾಗಿ ಮನೆ ಅಂಗಳದಲ್ಲಿ ನಿಲ್ಲಿಸಿದ ಕಾರು, ಬೈಕ್ ನೀರಿನಲ್ಲಿ ತೇಲಿಕೊಂಡು ಹೋಗಿದ್ದು ಪ್ರವಾಹದ ಭೀಕರತೆಗೆ ಸಾಕ್ಷಿ ಆಗಿತ್ತು.ನವರಾತ್ರಿ ಸಂಭ್ರಮದಲ್ಲಿದ್ದ ಜನರು ಮೇಘಸ್ಪೋಟ ದಿಂದಾಗಿ ಆತಂಕಿತ ರಾಗಿದ್ದಾರೆ.ಕಬ್ಬಿನಾಲೆ ಭಾಗದ ಪರ್ವತ ಶ್ರೇಣಿಯಲ್ಲಿ ಸಂಭವಿಸಿದ ಮೇಘ ಸ್ಫೋಟದಿಂದ ಪ್ರವಾಹ ರೂಪದಲ್ಲಿ ನೀರು ಹರಿದು ಬಂದಿದೆ.ನಮ್ಮ ಜೀವ ಮಾನದಲ್ಲಿ ಇಂತಹ ಘಟನೆಗಳನ್ನು ನೋಡುತ್ತಿರುವುದು […]

ಶ್ರೀ ಮಹಿಷಮರ್ದಿನಿ ದೇವಸ್ಥಾನ ಶ್ರೀ ಕ್ಷೇತ್ರ ಕಾನ್‍ಬೇರು ಹೊಸೂರು,ನಾ ರಾತ್ರಿ ಮಹೋತ್ಸವ ಸಂಭ್ರಮ

ಕುಂದಾಪುರ:ಶ್ರೀ ಕ್ಷೇತ್ರ ಕಾನ್‍ಬೇರು ಹೊಸೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಕಾರ್ಯಕ್ರಮ ಅಕ್ಟೋಬರ್ 3 ರಿಂದ ಆರಂಭಗೊಂಡು ಅಕ್ಟೋಬರ್ 12 ರ ತನಕ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ.ಶರನ್ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ದೇವಿಯ ಸನ್ನಿಧಾನದಲ್ಲಿ ಪ್ರತಿ ದಿನ ಬೆಳಿಗ್ಗೆ 8 ರಿಂದ ಮಧ್ಯಾಹ್ನ 12 ಗಂಟೆ ವರೆಗೆ ಚಂಡಿಕಾ ಹೋಮ,ದುರ್ಗಾ ಹೋಮ ಮತ್ತು ವಿಶೇಷ ಪೂಜೆ ಜರುಗಲಿದೆ.ಸಂಜೆ 5 ರಿಂದ ಶ್ರೀ ದೇವಿಯ ಕಲ್ಪೋಕ್ತ ಪೂಜೆ,ಸಹಸ್ರ ನಾಮಾರ್ಚನೆ,ಚಂಡಿಕಾ ಸಪ್ತಶತಿ ಪಾರಾಯಣ ಸೇವೆ ನಡೆಯಲಿದ್ದು […]

ಉಪ್ಪುಂದ:ಮೀನುಗಾರ ಮಹಿಳೆಯರು ಪ್ರಾರಂಭಿಸಿದಕೋಸ್ಟಲ್ ಮಾರ್ಟ್ ಮಳಿಗೆ ಶುಭಾರಂಭ

ಉಪ್ಪುಂದ:ಮನುವಿಕಾಸ ಸಂಸ್ಥೆ ಶಿರಸಿ ಮತ್ತು ನಬಾರ್ಡ್ ಬೆಂಗಳೂರು ಅವರ ಸಂಯೋಗದಲ್ಲಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಇತ್ತೀಚಿಗೆ ಪ್ರಾರಂಭವಾದ ಮೀನು ಉತ್ಪಾದಕರ ಮತ್ತು ಕೋಸ್ಟಲ್ ಮಾರ್ಟ್ ಉದ್ಘಾಟನಾ ಸಮಾರಂಭವು ಉಪ್ಪಂದ ಅಂಬಾಗಿಲಿನಲ್ಲಿ ನಡೆಯಿತು.ಆನಂದ್ ಖಾರ್ವಿ ಉಪ್ಪುಂದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮನುವಿಕಾಸ ಸಂಸ್ಥೆಯು ಈ ಒಂದು ರೈತ ಉತ್ಪಾದಕ ಸಂಸ್ಥೆಯನ್ನು ಪ್ರಾರಂಭಿಸಿ ಕೇವಲ ಮೀನುಗಾರ ಮಹಿಳೆಯರಿಂದ ಅವರಿಗೆ ಬೇಕಾದ ವಸ್ತುಗಳನ್ನು ಸ್ಪರ್ಧಾತ್ಮಕ ದರದಲ್ಲಿ ಖರೀದಿಸಲು ಮತ್ತು ಅವರು ಮನೆಯಲ್ಲಿ ತಯಾರಿಸಿದ ಗೃಹ ಉತ್ಪನ್ನಗಳನ್ನು ಅಲ್ಲಿ ತಂದಿಟ್ಟು ಮಾರಾಟ […]

You cannot copy content of this page