*ಜಡ್ಕಲ್ – ಮುದೂರು: ಕಸ್ತೂರಿ ರಂಗನ್ ವರದಿಗೆ ವಿರೋಧ -ಶಾಸಕ ಗುರುರಾಜ್ ಗಂಟಿಹೊಳೆ ಗ್ರಾಮಸ್ಥರೊಂದಿಗೆ ಮಾತುಕತೆ
ಕುಂದಾಪುರ:ಕಸ್ತೂರಿ ರಂಗನ್ ವರದಿ ಅನುಷ್ಠಾನ ಮತ್ತು ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆಯ ಆತಂಕದಲ್ಲಿರುವ ಜಡ್ಕಲ್, ಮುದೂರು ಗ್ರಾಮಕ್ಕೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿದರು. ಬಳಿಕ ಅಲ್ಲಿನ ನಿವಾಸಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದರು.ಈ ಸಂದರ್ಭ ಮಾತನಾಡಿದ ಶಾಸಕ ಗಂಟಿಹೊಳೆ,ಮೀಸಲು ಅರಣ್ಯ ಮತ್ತು ಬಫರ್ ಝೋನ್ ಪ್ರದೇಶಗಳಲ್ಲಿ ವಾಸಮಾಡುತ್ತಿರುವ ನಿವಾಸಿಗಳಿಗೆ ಕಸ್ತೂರಿ ರಂಗನ್ ವರದಿ ಅನುಷ್ಠಾನದಿಂದ ಆಗಬಹುದಾದ ಸಮಸ್ಯೆಗಳಿಗೆ ಭಯಗೊಂಡಿರುವ ಜಡ್ಕಲ್, ಮುದೂರು ಗ್ರಾಮದ ಜನರು ಈಗಾಗಲೇ ಅಸಮಾಧಾನ ಹೊರಹಾಕಿದ್ದಾರೆ.ಜೊತೆಗೆ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ ಮುಟ್ಟಿಸುವ ಮೂಲಕ […]