ಈಜಲು ಹೋದ ಇಬ್ಬರು ನೀರುಪಾಲು

ಮಂಗಳೂರು:ಮರವೂರು ಪಲ್ಗುಣಿ ನದಿಯಲ್ಲಿ ಈಜಲು ಹೋದ ಮಂಗಳೂರಿನ ಇಬ್ಬರು ನೀರುಪಾಲಾದ ಘಟನೆ ಭಾನುವಾರ ಸಂಜೆ ಸಂಭವಿಸಿದೆ.ಮಂಗಳೂರು ಕೊಟ್ಟಾರಚೌಕಿ ನಿವಾಸಿ ಸುಮಿತ್ (20) ಹಾಗೂ ಉರ್ವಸ್ಟೋರ್ ನಿವಾಸಿ ಅನೀಶ್ (19) ಎಂದು ಗುರುತಿಸಲಾಗಿದೆ.ಮರವೂರು ವೆಂಟೆಡ್ ಡ್ಯಾಂನ ಪಕ್ಕದಲ್ಲಿರುವ ರೈಲ್ವೆ ಸೇತುವೆ ಬಳಿ ಪಲ್ಗುಣಿ ನದಿಯಲ್ಲಿ ಈಜಲು ನಾಲ್ವರು ಯುವಕರ ತಂಡ ಹೋಗಿದ್ದು ಕೋಡಿಕಲ್ ನಿವಾಸಿಗಳಾದ ಅರುಣ್ ಹಾಗೂ ದೀಕ್ಷಿತ್ ಅಪಾಯವಿಲ್ಲದೆ ಬಚಾವಾಗಿದ್ದಾರೆ.ನಾಪತ್ತೆಯಾದವರ ಹುಡುಕಾಟಕ್ಕಾಗಿ ಅಗ್ನಿಶಾಮಕ ದಳ ಹಾಗೂ ಮುಳುಗು ತಜ್ಞರು ಆಗಮಿಸಿದ್ದು ಬಜಪೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ […]

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ,ಬೆಂಕಿ ಇಲ್ಲದೆ ಆಹಾರ ತಯಾರಿ ಕಾರ್ಯಕ್ರಮ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ಆಹಾರ ತಂತ್ರಜ್ಞಾನ ವಿಭಾಗದಿಂದ ನಿಸರ್ಗದತ್ತವಾಗಿ ದೊರೆಯುವ ಬಣ್ಣವನ್ನು ಬಳಸಿ ಅಂದರೆ ಹೂವು,ಹಣ್ಣು,ತರಕಾರಿಗಳನ್ನು ಬಳಸಿ ಹೊಸ ಬಗೆಯ ವರ್ಣರಂಜಿತ ಆಹಾರ ಪದಾರ್ಥಗಳನ್ನು ಬೆಂಕಿ ಇಲ್ಲದೆ ತಯಾರಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳಿಗೆ ಅರಿವುಮೂಡಿಸುವ ಸಲುವಾಗಿ ಹಾನಿಕಾರಕ ಬಣ್ಣವನ್ನು ಬಳಸದೆ ಸಹಜವಾಗಿ ಸಿಗುವ ಬಣ್ಣಗಳಿಂದ ಹೊಸ ಬಗೆಯ ಪಾನೀಯ,ತಿಂಡಿ ತಿನಿಸುಗಳನ್ನು ತಯಾರಿಸಿ ಅದರ ಮಹತ್ವವನ್ನು ತಿಳಿಸಿದರು .ಕಾಲೇಜಿನ ಸಂಸ್ಥಾಪಕ ಸುಬ್ರಮಣ್ಯ ,ಕಾಲೇಜಿನ ನಿರ್ದೇಶಕಿ ಮಮತಾ ಹಾಗೂ ಪ್ರಿನ್ಸಿಪಾಲ್ ರವಿರಾಜ್ ಶೆಟ್ಟಿ ಉಪಸ್ಥಿತರಿದ್ದರು. ತೀರ್ಪುಗಾರರಾಗಿ ಉಪನ್ಯಾಸಕರಾದ […]

ಬೈಂದೂರು ಅರ್ಬನ್ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಸಭೆ:8% ಡಿವಿಡೆಂಡ್ ಘೋಷಣೆ

ಕುಂದಾಪುರ:ಬೈಂದೂರು ಅರ್ಬನ್ ಸೌಹಾರ್ದಾ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸಭೆ ಸಂಘದ ಅಧ್ಯಕ್ಷರಾದ ಮಣಿಕಂಠ ಎಸ್ ದೇವಾಡಿಗ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಣೆ.ಬೈಂದೂರು ಸರಕಾರಿ ಪದವಿ ಪೂರ್ವ ಕಾಲೀಜಿಗೆ ಶೈಕ್ಷಣಿಕ ಸಹಾಯ ಧನ ವಿತರಣೆ.ನಿವೃತ್ತ ಸರಕಾರಿ ಉದ್ಯೋಗಿಗಳಿಗೆ ಸನ್ಮಾನ.ಸಾಧನೆಗೈದಿರುವ ಸಂಘದ ಸ್ವ ಸಹಾಯ ಸಂಘದ ಸದಸ್ಯರಿಗೆ ವಿಶೇಷ ಬಹುಮಾನಗಳನ್ನು ನೀಡುತ್ತಾ ಬಂದಿರುವ ಸಂಘವು,ಕೊರೊನಾ ಸಂದರ್ಭದಲ್ಲಿ ಅಶಕ್ತರಿಗೆ ಆಹಾರ ಕಿಟ್ ವಿತರಣೆ,ಅನಾರೋಗ್ಯ ಪೀಡಿತರಿಗೆ ಧನ ಸಹಾಯ ಹಸ್ತ, ಬೈಂದೂರೂಪೊಲೀಸ್ ಠಾಣೆಗೆ ನಾಲ್ಕು […]

You cannot copy content of this page