ಸ್ಮಶಾನಕ್ಕೆ ದಾರಿ ಕಲ್ಪಿಸುವಂತೆ ಆಗ್ರಹಿಸಿ ಗುಜ್ಜಾಡಿ ಪಂಚಾಯಿತಿ ಎದುರು ಆಹೋರಾತ್ರಿ ಧರಣಿ ಸತ್ಯಾಗ್ರಹ

ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚುಗೋಡು ಸನ್ಯಾಸಿಬಲ್ಲೆ ಸ್ಮಶಾನ ಹಾಗೂ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಅನಾದಿ ಕಾಲದ ರಸ್ತೆಯನ್ನು ಖಾಸಗಿ ಜಾಗದ ಮಾಲೀಕರು ಬಂದ್ ಮಾಡಿರುವುದನ್ನು ವಿರೋಧಿಸಿ.ಸಾರ್ವಜನಿಕ ಸ್ಮಶಾನವನ್ನು ಧ್ವಂಸ ಮಾಡಿದ್ದಾರೆ ಎಂದು ಆರೋಪಿಸಿ ಕಂಚುಗೋಡು ಸನ್ಯಾಸಿ ಬಲ್ಲೆ ಗ್ರಾಮಸ್ಥರು ಗುಜ್ಜಾಡಿ ಗ್ರಾಮ ಪಂಚಾಯಿತಿ ಎದುರುಗಡೆ ಅಹೋರಾತ್ರಿ ಧರಣಿ ಸತ್ಯಾಗ್ರಹದ ಮೂಲಕ ಪ್ರತಿಭಟನೆಯನ್ನು ಶುಕ್ರವಾರ ನಡೆಸಿದರು.ಸ್ಮಶಾನ ಸಂಪರ್ಕಕ್ಕೆ ದಾರಿ ಕಲ್ಪಿಸುವುದರ ಜತೆಗೆ ತಪ್ಪಿತಸ್ಥರ ವಿರುದ್ಧ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.ಸುಮಾರು ಎರಡು ಶತಮಾನಕ್ಕೂ ಹೆಚ್ಚು ಕಾಲ […]

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ ಸಹಕಾರ ಇಲಾಖೆ ಉಡುಪಿ ಜಿಲ್ಲೆ ವತಿಯಿಂದ ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ ಕಾರ್ಯಕ್ರಮದ ಅಂಗವಾಗಿ ಪರಿಸರ ಸ್ವಚ್ಛತೆ ಮತ್ತು ಗಿಡ ನೆಡುವ ಕಾರ್ಯಕ್ರಮ ಮರವಂತೆಯಲ್ಲಿ ನಡೆಯಿತು.ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಾಜಿ ವ್ಯವಸ್ಥಾಪಕ ಎಸ್.ವಿಶ್ವಂಬರ ಐತಾಳ್ ಗಿಡ ನೆಡುವ ಮೂಲಕ ಚಾಲನೆ ನೀಡಿದರು.ಸಂಘದ ಅಧ್ಯಕ್ಷೆ ಕಮಲಾಕ್ಷಿ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು,ಉಪಾಧ್ಯಕ್ಷೆ ವನಿತಾ ಖಾರ್ವಿ,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಶ್ರೀನಿವಾಸ […]

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ ಸ್ವರ್ಣಮುಖಿ ರಂಗ ಮಂದಿರದಲ್ಲಿ ಭರತನಾಟ್ಯ ದಿವ್ಯೋತ್ಸವ-ನೃತ್ಯಕಲೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ಗುರುವಾರ ನಡೆಯಿತು.ದೇಗುಲದ ಪವಿತ್ರ ವಾತಾವರಣದ ಮಧ್ಯೆ,ವಿವಿಧ ಭಾಗಗಳಿಂದ ಬಂದ 20ಕ್ಕೂ ಹೆಚ್ಚು ಯುವ ಕಲಾವಿದರು ಭರತನಾಟ್ಯವನ್ನು ಭಕ್ತಿ,ಶಿಸ್ತು ಮತ್ತು ನೃತ್ಯಶೈಲಿಯೊಂದಿಗೆ ಪ್ರಸ್ತುತಪಡಿಸಿದರು.ದರ್ಶನಾರ್ಥಿಗಳು,ಪಾಲಕರು ಮತ್ತು ಕಲೆ ಪ್ರೇಮಿಗಳು ವೇದಿಕೆಯಲ್ಲಿ ಆಕರ್ಷಕ ಪ್ರದರ್ಶನಗಳಿಂದ ಮೋಹಿತರಾದರು.ರೇವತಿ ಶ್ರೀನಿವಾಸನ್ ಲಾಲಿತ್ಯಭರಿತ ನಿರೂಪಣೆಯಿಂದ ಕಾರ್ಯಕ್ರಮ ನಡೆಸಿಕೊಟ್ಟರು.ನೃತ್ಯ ಬಿಂಬ ಪ್ರತಿಷ್ಠಾನ […]

You cannot copy content of this page