ನೀಲಿ ಫಲಕಗಳಲ್ಲಿ ನೆನಪಾಗಿ ನಿಂತವರು ಪುಸ್ತಕ ಬಿಡುಗಡೆ
ಕುಂದಾಪುರ:ಲೇಖಕ ಯೋಗೀಂದ್ರ ಮರವಂತೆ ಅವರು ಬರೆದಿರುವ ನೀಲಿ ಫಲಕಗಳಲ್ಲಿ ನೆನಪಾಗಿ ನಿಂತವರು ಎಂಬ ಪುಸ್ತಕದ ಬಿಡುಗಡೆ ಕಾರ್ಯಕ್ರಮ ಯು.ಕೆಯಲ್ಲಿ ಶನಿವಾರ ನಡೆಯಿತು.ಕನ್ನಡದ ಖ್ಯಾತ ಲೇಖಕ ವಿಮರ್ಶಕರಾದ ಎಸ್.ದಿವಾಕರ್ ಅವರು ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿ,ಇತಿಹಾಸ ಪ್ರಸಿದ್ಧರು ಇಲ್ಲಿ ಹಿಂದೊಮ್ಮೆ ವಾಸಿಸಿದ್ದ ಕಟ್ಟಡಗಳ ಗೋಡೆಯ ಮೇಲೆ ಬ್ಲೂಫ್ಲೇಕ್ ಅಥವಾ ನೀಲಿಫಲಕ ಅಳವಡಿಸುವ ಪರಂಪರೆ ಇದೆ.ಈ ಫಲಕಗಳಲ್ಲಿ ಅಲ್ಲಿ ವಾಸಿಸಿದ್ದ ವ್ಯಕ್ತಿಯ ಹೆಸರು, ಅವರ ಜೀವಮಾನ,ಸಾಧನೆಯ ಕ್ಷೇತ್ರದ ಸಂಕ್ಷಿಪ್ತ ಮಾಹಿತಿ ಇರುತ್ತದೆ.ಹಾಗೆ ನೋಡಿದರೆ ಈ ಒಂದೊಂದು ನೀಲಿ ಫಲಕದ್ದೂ ಒಂದೊಂದು ಕತೆ […]























































































































































































































































































































































































































































































































































































































































































































































































































































































































































































































































































































































































































































































































































































































































































