ಎಡ್ವರ್ಡ್ ಮೆಮೋರಿಯಲ್ ಕ್ಲಬ್ ಕುಂದಾಪುರ ನೂತನ ಕಾರ್ಯಕಾರಿ ಸಮಿತಿ ಆಯ್ಕೆ

ಕುಂದಾಪುರ:ಸುಮಾರು 96 ವರ್ಷಗಳ ಸುದೀರ್ಘ ಇತಿಹಾಸವುಳ್ಳ ಎಡ್ವರ್ಡ್ ಮೆಮೋರಿಯಲ್ ಕ್ಲಬ್ ಅಂಡ್ ರೀಡಿಂಗ್ ರೂಮ್ ಸೊಸೈಟಿ (ರಿ) ಕುಂದಾಪುರ ಅದರ ದ್ವೈವಾರ್ಷಿಕ ಮಹಾಸಭೆ ಚಿತ್ತರಂಜನ್ ಹೆಗ್ಡೆ ಹರ್ಕೂರು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ವಾರ್ಷಿಕ ವರದಿಯನ್ನು ಕಾರ್ಯದರ್ಶಿ ಉದಯಕುಮಾರ್ ಶೆಟ್ಟಿ ಕಾಲಾವರ ವಾಚಿಸಿದರು.2024-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯನ್ನು ಅವಿರೋಧವಾಗಿ ಆಯ್ಕೆಮಾಡಲಾಯಿತು.ನೂತನ ಅಧ್ಯಕ್ಷರಾಗಿ ಸುಭಾಶ್ಚಂದ್ರ ಶೆಟ್ಟಿ ಸೌಕೂರು,ಉಪಾಧ್ಯಕ್ಷರಾಗಿ ಸುಧೀರ್ ಶೆಟ್ಟಿ ಕೆಂಚನೂರು,ಕಾರ್ಯದರ್ಶಿಯಾಗಿ ಬಾಲಕೃಷ್ಣ ಶೆಟ್ಟಿ ಹಿಲಿಯಾಣ,ಜೊತೆ ಕಾರ್ಯದರ್ಶಿಯಾಗಿ ಕೆ.ಸೂರ್ಯಕಾಂತ ಮತ್ತು ಕೋಶಾಧಿಕಾರಿಯಾಗಿ ನವೀನ್ ಕುಮಾರ್ ಹೆಗ್ಡೆ ಶಾನಾಡಿ ಆಯ್ಕೆಯಾದರು.ಕ್ರೀಡಾ […]

ಆಲೂರು ಶಾಖೆ ನೂತನ ಪದಾಧಿಕಾರಿಗಳ ಪದಗ್ರಹಣ

ಕುಂದಾಪುರ:ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಮಿತಿ ಉಡುಪಿ ಅದರ ಆಲೂರು ಶಾಖೆ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಆಲೂರು ಮೂಕಾಂಬಿಕಾ ಸಭಾಭವನದಲ್ಲಿ ಸೋಮವಾರ ನಡೆಯಿತು.ಸಂಘದ ಪದಾಧಿಕಾರಿಗಳು ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿ ಪದಾಧಿಕಾರಿಗಳು,ಅಥಿತಿಗಳು,ಸಮಾಜ ಬಾಂಧವರು ಉಪಸ್ಥಿತರಿದ್ದರು.

ಶೋಷಿತರ ಸ್ವಾಭಿಮಾನಿ ಸಮಾವೇಶ,ಆಲೂರು ಶಾಖೆ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಕುದಾಪುರ:ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ),ಜಿಲ್ಲಾ ಸಮಿತಿ ಉಡುಪಿ,ಕುಂದಾಪುರ ತಾಲೂಕು ಸಮಿತಿ ವತಿಯಿಂದ ಶೋಷಿತರ ಸ್ವಾಭಿಮಾನಿ ಸಮಾವೇಶ ಮತ್ತು ಆಲೂರು ಶಾಖೆ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಆಲೂರು ಮೂಕಾಂಬಿಕಾ ಸಭಾಭವನದಲ್ಲಿ ಸೋಮವಾರ ನಡೆಯಿತು.ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಷ್ಪಾರ್ಚನೆ ಸಲ್ಲಿಸುವುದರ ಮುಖೇನ ಶೋಷಿತರ ಸಮಾವೇಶಕ್ಕೆ ಚಾಲನೆಯನ್ನು ನೀಡಲಾಯಿತು.ವಕೀಲರಾದ ಮಂಜುನಾಥ ಗಿಳಿಯಾರ್ ಮತ್ತು ವಿಜಯ ಕುಮಾರ್ ಅವರನ್ನು ಆಲೂರು ಗ್ರಾಮ ಶಾಖೆ ವತಿಯಿಂದ ಸನ್ಮಾನಿಸಲಾಯಿತು.ಅಂಬೇಡ್ಕರ್ ಹೋರಾಟ ಕುರಿತಾದ ಧ್ವನಿ ಸುರುಳಿಯನ್ನು ಬಿಡುಗಡೆ ಮಾಡಲಾಯಿತು.ಸಮಾಜದ ಹಿರಿಯ […]

You cannot copy content of this page