ಕಿರಿಮಂಜೇಶ್ವರ ಶ್ರೀ ಅಗಸ್ತೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಉತ್ಸವ ಸಂಭ್ರಮ
ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ ಉತ್ಸವ ಕಾರ್ಯಕ್ರಮ ಸಂಭ್ರಮದಿಂದ ಶನಿವಾರ ನಡೆಯಿತು.ಶ್ರೀ ಗಣೇಶ ಚತುರ್ಥಿ ಉತ್ಸವದ ಅಂಗವಾಗಿ ಶ್ರೀ ಮಹಾಗಣಪತಿ ದೇವರಿಗೆ 108 ಕಾಯಿ ಗಣಹವನ,ಸಹಸ್ರ ದೂರ್ವಾರ್ಚನೆ,ರಂಗಪೂಜೆ,ಅಲಂಕಾರ ಪೂಜೆ,ಮೋದಕ ನೈವೇದ್ಯ ಸೇವೆ ಹಣ್ಣುಕಾಯಿ ಮತ್ತು ಮಂಗಳಾರತಿ ಸೇವೆ.ಮಹಾಮಂಗಳಾರತಿ ಸೇವೆ ಹಾಗೂ ಕಡುಬು ಸೇವೆ ಮತ್ತು ಅನ್ನದಾನ ಸೇವೆಯನ್ನು ಸಮರ್ಪಿಸಲಾಯಿತು.ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಶ್ರೀ ಕ್ಷೇತ್ರಕ್ಕೆ ಶ್ರೀದೇವರ ಪ್ರಸಾದವನ್ನು ಸ್ವೀಕರಿಸಿದರು.ಬೈಂದೂರು ಕ್ಷೇತ್ರದ ಶಾಸಕ […]



















































































































































































































































































































































































































































































































































































































































































































































































































































































































































































































































































































































































































































































































































































































































































