ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ ವಸತಿ ಶಾಲೆ ಸಹೋದರ ವಿದ್ಯಾರ್ಥಿಗಳಾದ ಅನ್ವಿಶ್ ಕುಮಾರ್ ಪ್ರಥಮ ಸ್ಥಾನ ಪಡೆದು ವಿನ್ನರ್ ಪ್ರಶಸ್ತಿ ಜಯಿಸಿದ್ದಾರೆ ಹಾಗೂ ವಿನಿಶ್ ಕುಮಾರ್ ದ್ವಿತೀಯ ಸ್ಥಾನ ಪಡೆದಿದ್ದಾರೆ.ಶಿಕ್ಷಕಿ ಅನುಷಾ ಸಿ ಬಂಗೇರಾ ಗಂಗೊಳ್ಳಿ ಮತ್ತು ಕಾವ್ರಾಡಿ ವಿಜಯ್ ಕುಮಾರ್ ದಂಪತಿ ಪುತ್ರರರು.ಕುಂದಾಪುರ ಸೆಂಟರ್ ಪ್ರಸನ್ನ ಕೆ.ಬಿ,ಗಂಗೊಳ್ಳಿ ಸೆಂಟರ್‍ನ ಶಿಕ್ಷಕಿ ಸುನೀತಾ ತರಬೇತಿ ನೀಡಿದ್ದರು.

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್ ಗಳಿಸಿರುವ ಹೊಸಾಡು ಗ್ರಾಮದ ನಿವಾಸಿ ಸವಿತಾ ಸುಕುಮಾರ ಸುವರ್ಣ ಅವರ ಪುತ್ರಿ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ (ಬೋರ್ಡ್ ಹೈಸ್ಕೂಲ್) ವಿದ್ಯಾರ್ಥಿನಿ ವೈಷ್ಣವಿ ಎಸ್.ಎಚ್ ಅವರಿಗೆ ಕುಂದಾಪುರ ಗಾಂಧಿ ಮೈದಾನದಲ್ಲಿ ಸೋಮವಾರ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಾಲೂಕು ಆಡಳಿತ ಪರವಾಗಿ ಅಭಿನಂದಿಸಿ.50 ಸಾವಿರ ರೂಪಾಯಿ ಮೌಲ್ಯದ ಚೆಕ್ ವಿತರಿಸಲಾಯಿತು.ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ,ಕುಂದಾಪುರ […]

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು ಬ್ಯಾಂಕ್,ಸೌಪರ್ಣಿಕಾ ಸಂಜೀವಿನಿ ಗ್ರಾಮ ಮಟ್ಟದ ಒಕ್ಕೂಟ ಹೊಸಾಡು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಹೊಸಾಡು ಗ್ರಾಮ ಪಂಚಾಯಿತಿ ವಠಾರದಲ್ಲಿ ಸೋಮವಾರ ಗ್ರಾಮೋತ್ಸವ ಕಾರ್ಯಕ್ರಮ ನಡೆಯಿತು.ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೊಸಾಡು ಗ್ರಾಮೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ಬೇರೆ ಬೇರೆ ಇಲಾಖೆಗಳ ಯೋಜನೆಗಳು ಸೌಲಭ್ಯಗಳು ಜನರಿಗೆ ನೇರವಾಗಿ ತಲುಪಿಸಬೇಕು ಎನ್ನುವ ಉದ್ದೇಶದಿಂದ ಗ್ರಾಮ ಪಂಚಾಯಿತಿ […]

You cannot copy content of this page