ಶ್ರೀ ಗಿರಿಜಾ ಶಂಕರ ಕಲ್ಯಾಣೋತ್ಸವ ಕಾರ್ಯಕ್ರಮ
ಕುಂದಾಪುರ:ಬೈಂದೂರು ತಾಲೂಕಿನ ನಾಡ ಗ್ರಾಮದ ಕೋಣ್ಕಿ ನಿವಾಸಿ ಚಂದ್ರಕಾಂತಿ ಮತ್ತು ಸುಧಾಕರ ಶೆಟ್ಟಿ ನೇತೃತ್ವದಲ್ಲಿ ಶ್ರೀ ಗಿರಿಜಾ ಶಂಕರ ಕಲ್ಯಾಣೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಕಡಿಕೆ ಶ್ರೀ ಉಮಾಮಹೇಶ್ವರ ದೇವಸ್ಥಾನದ ವಠಾರದಲ್ಲಿ ಸೋಮವಾರ ಅದ್ದೂರಿಯಾಗಿ ನಡೆಯಿತು.ಶ್ರೀದೇವರ ಮೂರ್ತಿಯನ್ನು ಕೋಣ್ಕಿ ಮಹಾವಿಷ್ಣು ದೇವಸ್ಥಾನದಿಂದ ಕಡಿಕೆ ಶ್ರೀಉಮಾಮಹೇಶ್ವರ ದೇವಸ್ಥಾನದ ವರೆಗೆ ಭವ್ಯ ಮೆರವಣಿಗೆ ಮೂಲಕ ಪೂರ್ಣಕುಂಭ ಕಳಶ,ಚಂಡೆವಾದನದೊಂದಿಗೆ ಬರಮಾಡಿಕೊಳ್ಳಲಾಯಿತು.ಶ್ರೀ ಗಿರಿಜಾ ಶಂಕರ ಕಲ್ಯಾಣೋತ್ಸವ ಕಾರ್ಯಕ್ರಮದ ಅಂಗವಾಗಿ ಶತರುದ್ರಾಭೀಷೇಕ,ಮಹಾಮಂಗಳಾರತಿ,ಅನ್ನಸಂತರ್ಪಣೆ,ಭಜನಾ ಕಾರ್ಯಕ್ರಮ,ಶೋಭಾನೆ ಹಾಡು,ಗಾನಸಾರಥಿ ರಾಘವೇಂದ್ರ ಆಚಾರ್ಯ ಜನ್ಸಾಲೆ ಅವರ ಸಾರಥ್ಯದಲ್ಲಿ ದಕ್ಷಧ್ವರ […]






























































































































































































































































































































































































































































































































































































































































































































































































































































































































































































































































































































































































































































































































































































































































































