ತ್ರಾಸಿ:ಮಕ್ಕಳ ವಿಶೇಷ ಗ್ರಾಮಸಭೆ,ಮಕ್ಕಳ ಹಬ್ಬ ಕಾರ್ಯಕ್ರಮ
ಕುಂದಾಪುರ:ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಗ್ರಾಮ ಪಂಚಾಯಿತಿ ಕಡೆಯಿಂದ ಎಲ್ಲಾ ರೀತಿಯ ಸಹಕಾರವನ್ನು ನೀಡಲಾಗುವುದು ಎಂದು ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಿಥುನ್ ದೇವಾಡಿಗ ಹೇಳಿದರು.ಕರ್ನಾಟಕ ಸರಕಾರ,ಜಿಲ್ಲಾ ಪಂಚಾಯತ್ ಉಡುಪಿ,ತಾಲೂಕು ಪಂಚಾಯತ್ ಕುಂದಾಪುರ,ಗ್ರಾಮ ಪಂಚಾಯತ್ ತ್ರಾಸಿ ವತಿಯಿಂದ ತ್ರಾಸಿ ಬೀಚ್ ಗಾರ್ಡನ್ನಲ್ಲಿ ಶುಕ್ರವಾರ ನಡೆದ ಮಕ್ಕಳ ವಿಶೇಷ ಗ್ರಾಮಸಭೆ,ಮಕ್ಕಳ ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮಕ್ಕಳ ವಿಶೇಷ ಗ್ರಾಮಸಭೆಯನ್ನು ನಡೆಸಲು ತ್ರಾಸಿ ಗ್ರಾಮ ಪಂಚಾಯತ್ನ್ನು ಆಯ್ಕೆ ಮಾಡಿರುವುದಕ್ಕೆ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗೆ ವಂದನೆಯನ್ನು ಸಲ್ಲಿಸಿದರು. ತ್ರಾಸಿ […]



























































































































































































































































































































































































































































































































































































































































































































































































































































































































































































































































































































































































































































































































































































































































































