ಸಂಪರ್ಕ ರಸ್ತೆ,ಚರಂಡಿ ದುರಸ್ತಿಗೊಳಿಸುವಂತೆ ಗಂಗೊಳ್ಳಿಯಲ್ಲಿ ಮೌನ ಪ್ರತಿಭಟನೆ
ಕುಂದಾಪುರ:ತಾಲೂಕಿನ ಗಂಗೊಳ್ಳಿ ಪಂಜುರ್ಲಿ ದೇವಸ್ಥಾನದ ಬಳಿ ಹಾದು ಹೋಗಿರುವ ತೆರೆದ ಬೃಹತ್ ಚರಂಡಿಯನ್ನು ದುರಸ್ಥಿಗೊಳಿಸುವಂತೆ ಹಾಗೂ ಪಂಜುರ್ಲಿ ದೇವಸ್ಥಾನಕ್ಕೆ ದಾರಿ ಕಲ್ಪಿಸುವಂತೆ ಆಗ್ರಹಿಸಿ ಗಂಗೊಳ್ಳಿ ಕಳುವಿನಬಾಗಿಲು ಚರಂಡಿ ಬಳಿ ಸ್ಥಳೀಯರು ಮತ್ತು ಮಕ್ಕಳು ಪೋಸ್ಟರ್ ಹಿಡಿದು ಬೃಹತ್ ಪ್ರತಿಭಟನೆಯನ್ನು ಭಾನುವಾರ ನಡೆಸಿದರು.ಗಂಗೊಳ್ಳಿ ಗ್ರಾಮದ ದೊಡ್ಡಹಿತ್ಲು ಪಂಜುರ್ಲಿ ದೇವಸ್ಥಾನದ ಬಳಿ ಹಾದುಹೋಗಿರುವ ತೆರೆದ ಚರಂಡಿ ಕಲುಷಿತ ಕಪ್ಪು ನೀರಿನೊಂದಿಗೆ ಹರಿಯುತ್ತಿದೆ.ತೋಡಿನಲ್ಲಿ ಹರಿಯುವ ತ್ಯಾಜ್ಯ ದುರ್ನಾತ ಬೀರುತ್ತಿದೆ.ಸಾಂಕ್ರಮಿಕ ರೋಗ ಹರಡುವ ಭೀತಿ ಇದೆ.ಸೊಳ್ಳೆ ಕಡಿತದಿಂದ ಮಕ್ಕಳು ಸಂಕಟ ಪಡುತ್ತಿದ್ದಾರೆ.ಚರ್ಮ ರೋಗ […]






























































































































































































































































































































































































































































































































































































































































































































































































































































































































































































































































































































































































































































































































































































































































































