ಕರ್ನಾಟಕ ಬ್ಯಾಂಕ್ ಅಡ್ಯನಡ್ಕ ಶಾಖೆಯಲ್ಲಿ ಕಳ್ಳತನ,ಕೋಟ್ಯಂತರ ಮೌಲ್ಯದ ಚಿನ್ನಾಭರಣ ಕಳವು

ಮಂಗಳೂರು:ಸಮೀಪದ ಅಡ್ಯನಡ್ಕದಲ್ಲಿ‌ ನಡೆದಿದೆ.ಸುಮಾರು 2 ರಿಂದ 3 ಕೋಟಿ ರೂ. ನಗದು ಮತ್ತು ಬಂಗಾರ ಕಳ್ಳರ ಪಾಲಾಗಿದೆ.ಬುಧವಾರ ರಾತ್ರಿ 2.30 ರಿಂದ ಬೆಳಗ್ಗಿನ ಜಾವ 4 ಗಂಟೆಯಸುಮಾರಿಗೆ ನಡೆದಿರುವ ಶಂಕೆ ವ್ಯಕ್ತವಾಗಿದೆ.ಕರ್ನಾಟಕ ಬ್ಯಾಂಕ್ ಅಡ್ಯನಡ್ಕ ಶಾಖೆಯಲ್ಲಿ ಕಳ್ಳತನ ನಡೆದಿದ್ದು,ಕಿಟಕಿಗಳನ್ನು ಮುರಿದು ಕಳ್ಳರು ಒಳನುಗ್ಗಿದ್ದಾರೆನ್ನಲಾಗಿದೆ.ಸುಮಾರು 20 ವರುಷ ಹಳೆಯ ಕಟ್ಟಡದಲ್ಲಿ ಈ ಬ್ಯಾಂಕ್ ಇದ್ದು, ಬ್ಯಾಂಕ್ ನ ಸುತ್ತಲೂ ಕಾಡು-ಪೊದೆಗಳೆ ಆವರಿಸಿಕೊಂಡಿದೆ.ಯಾವುದೇ ಮುಂಜಾಗ್ರತೆ ಇಲ್ಲದ ಕಟ್ಟಡದಲ್ಲಿ ಬ್ಯಾಂಕ್‌ ಕಾರ್ಯ ನಿರ್ವಹಿಸುತ್ತಿದ್ದು, ಅಜಾಗರೂಕತೆಯೇ ಕಳ್ಳತನಕ್ಕೆ ಕಾರಣವಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ […]

ಪತಿ ಮನೆಯಲ್ಲಿ ನೇಣು ಬಿಗಿದು ಕೊಂಡು ನವ ವಿವಾಹಿತೆ ಆತ್ಮಹತ್ಯೆ

ಮಂಗಳೂರು:ನವವಿವಾಹಿತೆ ನೇಣು ಬಿಗಿದು ಪತಿ ಮನೆಯಲ್ಲಿ ಆತ್ಯಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಕುರಿಯ ಗಡಾಜೆ ಎಂಬಲ್ಲಿ ಫೆ.6 ರಂದು ನಡೆದಿದೆ.ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ರಾಮ್ಮಣ್ಣ ಗೌಡ ಮತ್ತು ಪುಪ್ಪ ದಂಪತಿ ಪುತ್ರಿ ಶೋಭಾ ಎಂಬಾಕೆ ನೇಣಿಗೆ ಶರಣಾದವರು.ಶೋಭಾ ಅವರನ್ನು ಕಳೆದ ಒಂದೂವರೆ ತಿಂಗಳ ಹಿಂದೆ ಪುತ್ತೂರು ಕುರಿಯ ಗಡಾಜೆ ರೋಹಿತ್ ರವರಿಗೆ ಮದುವೆ ಮಾಡಿ ಕೊಡಲಾಗಿತ್ತು. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ನವ ವಿವಾಹಿತೆ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟವಾದ ಕಾರಣ […]

ನಾಡ:ಹೆಮ್ಮುಂಜೆ ಶಾಲೆಗೆ ಧನಸಹಾಯ ವಿತರಣೆ

ಕುಂದಾಪುರ:ಬೈಂದೂರು ವಲಯದ ಸರಕಾರಿ ಕಿರಿಯ ಪ್ರಾಥಮಿಕ ಹೆಮ್ಮುಂಜೆ ಶಾಲೆಯಲ್ಲಿ ನಿರ್ಮಿಸುತ್ತಿರುವ ಕಂಪ್ಯೂಟರ್ ಕ್ಯಾಬಿನ್ ರಚನೆಗೆ ನಾಡ ಗುಡ್ಡೆಹೋಟೆಲ್ ಅಯ್ಯಪ್ಪ ಸ್ವಾಮಿ ಭಕ್ತವೃಂದವರ ವತಿಯಿಂದ 10,100.ರೂ ಅನ್ನು ಧನಸಹಾಯದ ರೂಪದಲ್ಲಿ ಬುಧವಾರ ನೀಡಲಾಯಿತು.ಈ ಸಂದರ್ಭದಲ್ಲಿ ಅಯ್ಯಪ್ಪ ಸ್ವಾಮಿ ಭಕ್ತವೃಂದ ಚಪ್ಪರದ ಪ್ರಮುಖರಾದ ಕಾಮೇಶ ದೇವಾಡಿಗ ತೆಂಕಬೈಲು ಮತ್ತು ಬಳಗದವರು,ಶಾಲೆಯ ಮುಖ್ಯೋಪಾಧ್ಯಾಯರು,ಎಸ್‍ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು,ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

You cannot copy content of this page