ತ್ರಾಸಿ:ಅಪರಿಚಿತ ಗಂಡಸಿನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ಗ್ರಾಮದ ಕಂಚುಗೋಡು ಸಮೀಪ ಕಡಲ ತೀರದ ಬಳಿ ಅಂದಾಜು 50 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಶವ ಭಾನುವಾರ ಪತ್ತೆಯಾಗಿದೆ.ಗಂಗೊಳ್ಳಿ ಠಾಣೆ ಪಿಎಸ್‍ಐ ಗುಪ್ತಚರ ವಿಭಾಗ ಬಸವ ಕನಟ್ಟಿ,ಕರಾವಳಿ ನಿಯಂತ್ರಣ ದಳ ಸಿಬ್ಬಂದಿ ನಿಶಾಂತ ಖಾರ್ವಿ,ಹೆಡ್ ಕಾನ್ಸ್ಟೇಬಲ್ ನಾಗರಾಜ ನಾಯಕವಾಡಿ,ಮಾಳಿಂಗರಾಯ ಸ್ಥಳದಲ್ಲಿ ಹಾಜರಿದ್ದರು.ಆಪತ್ಭಾಂದವ ಇಬ್ರಾಹಿಂ ಗಂಗೊಳ್ಳಿ,ಕೃಷ್ಣ,ಕಿಟ್ಟ,ಅಕ್ಷಯ್ ಖಾರ್ವಿ ಅವರು ಶವವನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು.

ಯಕ್ಷಧ್ರುವ ಪಟ್ಲ ಫೌಂಢೇಶನ್ ಟ್ರಸ್ಟ್ ಮಂಗಳೂರು:ನೂತನ ಮನೆ ಕೀಲಿಕೈ ಹಸ್ತಾಂತರ

ಮಂಗಳೂರು:ಯಕ್ಷಧ್ರುವ ಪಟ್ಲ ಫೌಂಢೇಶನ್ ಟ್ರಸ್ಟ್ (ರಿ) ಮಂಗಳೂರು ಪಟ್ಲ ಯಕ್ಷಾಶ್ರಯ ಯೋಜನೆಯಡಿಯಲ್ಲಿ ವಿಟ್ಲ ಕೇಪು ಶ್ರೀ ಉಳ್ಳಾಲ್ತಿ ದುರ್ಗಾಪರಮೇಶ್ವರೀ ದೇವಸ್ಥಾನದ ಹತ್ತಿರದಲ್ಲಿ ನಿರ್ಮಾಣಗೊಂಡಿರುವ “ಶ್ರೀದೇವಿ ನಿಲಯ” ನೂತನ ಮನೆಯ ಕೀಲಿಕೈಯನ್ನು ಹನುಮ ಗಿರಿಮೇಳದ ಕಲಾವಿದ ಶ್ರೀ ರೂಪೇಶ್ ಆಚಾರ್ಯ ಅವರಿಗೆ ಭಾನುವಾರ ಹಸ್ತಾಂತರ ಮಾಡಲಾಯಿತು.ಯಕ್ಷಧ್ರುವ ಪಟ್ಲ ಸತೀಶ ಶೆಟ್ಟಿ ಹಾಗೂ ನೂತನ ಮನೆಯ ನಿರ್ಮಾಣಕ್ಕೆ ಕಾರಣೀಕರ್ತರಾದ ದಾನಿಗಳಾದ ಅಶೋಕ್ ಶೆಟ್ಟಿ ಬೆಳ್ಳಾಡಿ ಅವರು ಫಲಾನುಭವಿಗಳಿಗೆ ಮನೆ ಹಸ್ತಾಂತರಿಸಿ ಶುಭಹಾರೈಸಿದರು.ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ವಿಟ್ಲ ಘಟಕದ ಪ್ರಧಾನ […]

ಗಂಗೊಳ್ಳಿ:ಬೈಂದೂರು ವೃತ್ತ ನಿರೀಕ್ಷಕರಿಗೆ ಮನವಿ

ಕುಂದಾಪುರ:ಗಂಗೊಳ್ಳಿ ಮ್ಯಾಂಗನೀಸ್ ರಸ್ತೆ ಅಂಗಡಿಯೊಂದರಿಂದ ಲಕ್ಷಾಂತರ.ರೂ ಮೌಲ್ಯದ ಸೀಸ ಕಳವುಗೈದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಹೆಚ್ಚಿನ ತನಿಖೆಗೆ ಒಳಪಡಿಸುವಂತೆ ಗಂಗೊಳ್ಳಿ ಕರಾವಳಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸಂಘದ ವತಿಯಿಂದ ಬೈಂದೂರು ವೃತ್ತ ನಿರೀಕ್ಷ ಸವಿತ್ರತೇಜ ಅವರನ್ನು ಶುಕ್ರವಾರ ಭೇಟಿ ಮಾಡಿ ಮನವಿಯನ್ನು ಸಲ್ಲಿಸಲಾಯಿತು.ಈ ಸಂದರ್ಭ ಗಂಗೊಳ್ಳಿ ಕರಾವಳಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಯಶವಂತ ಗಂಗೊಳ್ಳಿ,ಗೌರವಾಧ್ಯಕ್ಷ ಗಣಪತಿ ಖಾರ್ವಿ,ಮೀನುಗಾರ ಮುಖಂಡ ರಮೇಶ ಕುಂದರ್, ಪರ್ಸಿನ್ ಬೋಟ್ ಹಾಗೂ ವಿವಿಧ ಮೀನುಗಾರ ಸಂಘಟನೆಯ ಪ್ರಮುಖರು,ಮೀನುಗಾರರು ಉಪಸ್ಥಿತರಿದ್ದರು.

You cannot copy content of this page