ಕೇಂದ್ರ ಸಮಿತಿ ಒಕ್ಕೂಟ ಪದಗ್ರಹಣ,ಅನುದಾನಗಳ ವಿತರಣಾ ಕಾರ್ಯಕ್ರಮ
ಕುಂದಾಪುರ:ಕಷ್ಟದಲ್ಲಿರುವ ಜನರನ್ನು ಆರ್ಥಿಕವಾಗಿ ಶೈಕ್ಷಣಿಕವಾಗಿ ಸಾಮಾಜಿಕವಾಗಿ ಮೇಲೆತ್ತುವ ಉದ್ದೇಶದಿಂದ ಆರಂಭಗೊಂಡಿರುವ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರಾಜ್ಯದ 31 ಜಿಲ್ಲೆಗಳಲ್ಲಿ ಕಾರ್ಯಚರಿಸುತ್ತಿರುವುದರ ಜತೆಗೆ ಕೇರಳ ರಾಜ್ಯದ ಕಾಸರಗೋಡುನಲ್ಲಿಯೂ ಜನ ಸೇವಾ ಕಾರ್ಯಗಳನ್ನು ಮಾಡುತ್ತಿದೆ ಎಂದು ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಅಪ್ಪಣ್ಣ ಹೆಗ್ಡೆ ಹೇಳಿದರು. ಬೈಂದೂರು ತಾಲೂಕಿನ ನಾಗೂರು ಶ್ರೀಗೋಪಾಲಕೃಷ್ಣ ಸಭಾ ಭವನದಲ್ಲಿ ಶನಿವಾರ ನಡೆದ ಕೇಂದ್ರ ಸಮಿತಿ ಒಕ್ಕೂಟದ ಪದಗ್ರಹಣ ಮತ್ತು ವಿವಿಧ ಅನುದಾನಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸಂಘದ ಸದಸ್ಯರಿಗೆ ಸಹಾಯ ಸಹಕಾರ ಮಾಡುವುದರ […]



























































































































































































































































































































































































































































































































































































































































































































































































































































































































































































































































































































































































































































































































































































































































































