ತಲ್ಲೂರು:ಶ್ರೀಬ್ರಹ್ಮ ಬೈದರ್ಕಳ,ಪರಿವಾರ ದೈವಗಳ ಮೂರ್ತಿ ಮೆರವಣಿಗೆ

ಕುಂದಾಪುರ:ತಾಲೂಕಿನ ತಲ್ಲೂರು ಗರಡಿ ಶ್ರೀಬ್ರಹ್ಮ ಬೈದರ್ಕಳ ಮತ್ತು ಮುಡೂರ ಹಾೈಗುಳಿ ಹಾಗೂ ಪರಿವಾರ ದೇವರ ಪುನರ್ ಪ್ರತಿಷ್ಠೆ,ಬ್ರಹ್ಮಕಲಶ ಕಾರ್ಯಕ್ರಮದ ಅಂಗವಾಗಿ ದೈವಗಳ ಮೂರ್ತಿ ಪುರಪ್ರವೇಶ ಮೆರವಣಿಗೆ ಅದ್ದೂರಿಯಾಗಿ ನಡೆಯಿತು.ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಅವರು ದೈವಗಳ ಪುರಪ್ರವೇಶ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ದೈವಸ್ಥಾನದ ಅನುವಂಶಿಕ ಮೊಕ್ತೇಸರರು,ಪ್ರಾತ್ರಿಗಳು,ಗ್ರಾಮಸ್ಥರು,ಅರ್ಚಕರು ಉಪಸ್ಥಿತರಿದ್ದರು.ಜ.21 ರಿಂದ ಜ.28 ರ ವರೆಗೆ ನಾನಾ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.

ಜ.26 ರಂದು ಬೃಹತ್ ರಕ್ತದಾನ ಶಿಬಿರ

ಕುಂದಾಪುರ:ರಕ್ತ ನಿಧಿ ಕೇಂದ್ರ ರೆಡ್‍ಕ್ರಾಸ್,ಸಹಕಾರ ಇಲಾಖೆ ಕುಂದಾಪುರ ಉಪವಿಭಾಗ,ಕುಂದಾಪುರ – ಬೈಂದೂರು ತಾಲೂಕಿನ ವಿವಿಧ ಸಹಕಾರ ಸಂಘ,ಜೆ.ಸಿ.ಐ ಸಿ.ಟಿ ಕುಂದಾಪುರ ಮತ್ತು ರೋಟರಿ ಸನ್‍ರೈಸ್ ಕುಂದಾಪುರ ಅವರ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ ಜ.26 ರಂದು ಶುಕ್ರವಾರ ಬೆಳಿಗ್ಗೆ 9 ರಿಂದ 1 ರ ತನಕ ಶ್ರೀಲಕ್ಷ್ಮೀ ನರಸಿಂಹ ಕಲಾಮಂದಿರ ಜೂನಿಯರ್ ಕಾಲೇಜು ಕುಂದಾಪುರದಲ್ಲಿ ನಡೆಯಲಿದೆ ಎಂದು ಮಹಿಳಾ ವಿವಿಧೋದ್ದೇಶ ಸಹಕಾರ ಸಂಘ ಗಂಗೊಳ್ಳಿ ತಿಳಿಸಿದೆ.ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವಿನಂತಿಸಿಕೊಂಡಿದೆ.

ಬಡಾಕೆರೆ ಶಾಲೆ ದತ್ತು ಸ್ವೀಕಾರ,ಪೂರ್ವಭಾವಿ ಸಭೆ

ಕುಂದಾಪುರ:ಅವನತಿಯಲ್ಲಿರುವ ಸರಕಾರಿ ಶಾಲೆಗಳನ್ನು ಉದ್ಯಮಿಗಳು,ದಾನಿಗಳು,ಸಂಘ ಸಂಸ್ಥೆಗಳು ದತ್ತು ಸ್ವೀಕಾರ ಮಾಡುವುದರ ಮುಖೇನ ಗ್ರಾಮೀಣ ಪ್ರದೇಶದ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಬೇಕು ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಬಡಾಕೆರೆ ಶಾಲೆಯಲ್ಲಿ ಬುಧವಾರ ನಡೆದ ಶಾಲೆ ದತ್ತು ಸ್ವೀಕಾರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಸರಕಾರಿ ಶಾಲೆಗಳನ್ನು ಉಳಿಸಬೇಕು ಎನ್ನುವ ನೆಲೆಯಲ್ಲಿ 300 ಟ್ರಿಸ್ ಎನ್ನುವ ವಿನೂತನ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಇವೊಂದು ಪುಣ್ಯದ ಕೆಲಸದಲ್ಲಿ ಭಾಗಿದಾರರಾಗುವ ಮುಖೇನ ಮುಖೇನ ಸರಕಾರಿ […]

You cannot copy content of this page