ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಗದೀಶ ಪಿ.ಪೂಜಾರಿ ಹಕ್ಕಾಡಿ ಹಾಗೂ ಉಪಾಧ್ಯಕ್ಷರಾಗಿ ಸತೀಶ ಕುಮಾರ್ ಶೆಟ್ಟಿ ಆಯ್ಕೆ

ಕುಂದಾಪುರ:ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಅದರ ಪ್ರಧಾನ ಕಚೇರಿಯಲ್ಲಿ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸಭೆ ಗುರುವಾರ ನಡೆಯಿತು. ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಅದರ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಜಗದೀಶ ಪಿ.ಪೂಜಾರಿ ಹಕ್ಕಾಡಿ ಹಾಗೂ ಉಪಾಧ್ಯಕ್ಷರಾಗಿ ಸತೀಶ ಕುಮಾರ್ ಶೆಟ್ಟಿ ಆಯ್ಕೆಯಾಗಿದರು.ಅಧ್ಯಕ್ಷ ಜಗದೀಶ ಪಿ.ಪೂಜಾರಿ ಹಕ್ಕಾಡಿ ಮಾತನಾಡಿ,ಸಾರ್ವಜನಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಅರೆಹೊಳೆ ಕುದ್ರುಕೋಡು ಮಧ್ಯ ಭಾಗದಲ್ಲಿ ನಮ್ಮ ಸಂಘದ ವತಿಯಿಂದ ರೇಷನ್ ಅಂಗಡಿಯನ್ನು ತೆರೆಯುವ ಉದ್ದೇಶವನ್ನು […]

ಕನಕ ಜಗದೀಶ್ ಶೆಟ್ಟಿ ದಂಪತಿಗಳಿಗೆ ಸನ್ಮಾನ

ಕುಂದಾಪುರ:ಹೆಮ್ಮಾಡಿ ಜಯಶ್ರೀ ಸಭಾಭವನದ ವಠಾರದಲ್ಲಿ ಶನಿವಾರ ನಡೆದ ಪ್ರಾಂತೀಯ ಸಮ್ಮೇಳನದಲ್ಲಿ ಲಯನ್ ಪ್ರಾಂತೀಯ ಅಧ್ಯಕ್ಷ ಎಂಜೆಎಫ್ ಜಗದೀಶ್ ಶೆಟ್ಟಿ ಕುದ್ರಕೋಡು ಮತ್ತು ಅವರ ದಂಪತಿ ಪ್ರಥಮ ಮಹಿಳೆ ಪ್ರಾಂತ್ಯ 4 ಸುಮಂಗಲಾ ಜಗದೀಶ್ ಶೆಟ್ಟಿ ಹಾಗೂ ಅವರ ಪುತ್ರಿ ದಿಶಾರಾಣಿ ಅವರನ್ನು ಲಯನ್ಸ್ ಇಂಟರ್ ನ್ಯಾಷನಲ್ ಪ್ರಾಂತ್ಯ 4,ಜಿಲ್ಲೆ 317ಸಿ ವತಿಯಿಂದ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಅತಿಥಿಗಳು ಉಪಸ್ಥಿತರಿದ್ದರು.

ಲಯನ್ಸ್ ಪ್ರಾಂತೀಯ ಸಮ್ಮೇಳನ,ಕನಕ 2025 ಕಾರ್ಯಕ್ರಮ ಉದ್ಘಾಟನೆ

ಕುಂದಾಪುರ:ಕಳೆದ ಹತ್ತೊಂಭತ್ತು ವರ್ಷಗಳಿಂದ ಅಂತರಾಷ್ಟ್ರೀಯ ಲಯನ್ಸ್ ಕ್ಲಬ್ ಮೂಲಕ ಮುಂಬೈ ಸೇರಿದಂತೆ ಉಡುಪಿ ಜಿಲ್ಲೆಯ ಭಾಗದಲ್ಲಿ ಸಾಮಾಜಿಕ ಕಾರ್ಯಗಳನ್ನು ಮಾಡಿಕೊಂಡು ಬರಲಾಗುತ್ತಿದ್ದು.ಅಶಕ್ತರ ಬಾಳಿಗೆ ನೆರವನ್ನು ಒದಗಿಸಿಕೊಡುವುದರ ಜತೆಗೆ ಸೇವಾ ಕಾರ್ಯಗಳನ್ನು ಮಾಡುತ್ತಾ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತನ್ನು ನೀಡಲಾಗುತ್ತಿದೆ ಎಂದು ಉದ್ಯಮಿಗಳಾದ ಲಯನ್ ಪ್ರಾಂತೀಯ ಅಧ್ಯಕ್ಷ ಎಂಜೆಎಫ್ ಕನಕ ಜಗದೀಶ ಶೆಟ್ಟಿ ಕುದ್ರಕೋಡು ಹೇಳಿದರು.ಲಯನ್ಸ್ ಇಂಟರ್ ನ್ಯಾಷನಲ್ ಪ್ರಾಂತ್ಯ 4 ಜಿಲ್ಲೆ 317ಸಿ ವತಿಯಿಂದ ಜ್ಯುವೆಲ್ ಪಾರ್ಕ್ ಹೆಮ್ಮಾಡಿಯಲ್ಲಿ ಶನಿವಾರ ನಡೆದ ಲಯನ್ಸ್ ಪ್ರಾಂತೀಯ ಸಮ್ಮೇಳನ ಕನಕ-2025 […]

You cannot copy content of this page