ಚಿತ್ತೂರು ಶಾಲೆಯಲ್ಲಿ ಕ್ರಿಡೋತ್ಸವ ಕಾರ್ಯಕ್ರಮ,ಕಿಂಡರ್‍ಗಾರ್ಡನ್ ಉದ್ಘಾಟನೆ

ಸರಕಾರ ಹಾಗೂ ದಾನಿಗಳ ಸಹಭಾಗಿತ್ವದಲ್ಲಿ ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಚಿತ್ತೂರು ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕಿಂಡರ್ ಗಾರ್ಡನ್ ಅನ್ನು ಸಮಾಜ ಸೇವಕ ಕೃಷ್ಣಮೂರ್ತಿ ಮಂಜ ಹಾಗೂ ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯ ಆಲೂರು ಆಡಳಿತ ನಿರ್ದೇಶಕ ಡಾ.ರಾಜೇಶ್ ಬಾಯರಿ ಅವರು ಜಂಟಿಯಾಗಿ ಶನಿವಾರ ಉದ್ಘಾಟಿಸಿದರು. ಕುಂದಾಪುರ:ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಚಿತ್ತೂರು ಶಾಲೆಯಲ್ಲಿ ಕ್ರೀಡೋತ್ಸವ,ಕಿಂಡರ್‍ಗಾರ್ಡನ್ ಉದ್ಘಾಟನೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಶನಿವಾರ ನಡೆಯಿತು.ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಕೃಷ್ಣಮೂರ್ತಿ […]

ಶರಧಿ ಆರ್ ಗೆ ಚಾಂಪಿಯನ್ ಪ್ರಶಸ್ತಿ

ಕುಂದಾಪುರ:ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಬೆಂಗಳೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಅಬಾಕಸ್ ಸ್ಪರ್ದೆಯಲ್ಲಿ ಗಂಗೊಳ್ಳಿ ಖಾರ್ವಿಕೇರಿ ಕೊಂಚಾಡಿ ರಾಧಾ ಶೆಣೈ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿ ಶರ ಆರ್ ಚಾಂಪಿಯನ್ ಪ್ರಶಸ್ತಿಯನ್ನು ಜಯಿಸಿದ್ದಾರೆ.ಶಿಕ್ಷಕರಾದ ಪ್ರಸನ್ನ ಕೆ,ಮಹಾಲಕ್ಷ್ಮೀ,ಸುನೀತ ತರಬೇತಿ ನೀಡಿದ್ದರು.ಈಕೆ ಅರಾಟೆ ರಾಘವೇಂದ್ರ ಪೂಜಾರಿ ಮತ್ತು ಶಿಕ್ಷಕಿ ಯಶೋದ ದಂಪತಿ ಪುತ್ರಿ.

ಶ್ರೀ ಈಶ್ವರಯ್ಯ ನಂದಿಕೇಶ್ವರ ಸಪರಿವಾರ ದೈವಸ್ಥಾನ ಕೊಳೂರು ವಾರ್ಷಿಕ ಹಾಲು ಹಬ್ಬ ಸೇವೆ,ಪ್ರತಿಷ್ಠಾ ಮಹೋತ್ಸವ

ಕುಂದಾಪುರ:ತಾಲೂಕಿನ ಕುಂದಬಾರಂದಾಡಿ ಗ್ರಾಮದ ಕೊಳೂರು ಶ್ರೀ ಈಶ್ವರಯ್ಯ ನಂದಿಕೇಶ್ವರ ಸಪರಿವಾರ ದೈವಸ್ಥಾನದಲ್ಲಿ ವಾರ್ಷಿಕ ಹಾಲು ಹಬ್ಬ ಸೇವೆ,ಕಲಾಹೋಮ,ಗೆಂಡ ಸೇವೆ ಹಾಗೂ ಏಳನೇ ವರ್ಷದ ವಾರ್ಷಿಕ ಮಹೋತ್ಸವ ಕಾರ್ಯಕ್ರ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಬುಧವಾರ ನಡೆಯಿತು.ವಾರ್ಷಿಕ ಉತ್ಸವದ ಅಂಗವಾಗಿ ಶ್ರೀ ದೇವರಿಗೆ ಶ್ರೀ ಈಶ್ವರಯ್ಯ ನಂದಿಕೇಶ್ವರ ಪರಿವಾರ ದೈವಗಳಿಗೆ ಹಣ್ಣುಕಾಯಿ,ಮಂಗಳಾರತಿ ಸೇವೆ,ಗೆಂಡ ಸೇವೆ ಹಾಗೂ ಅನ್ನದಾನ ಸೇವೆಯನ್ನು ಸಲ್ಲಿಸಲಾಯಿತು.ಭಕ್ತರು ಕ್ಷೇತ್ರಕ್ಕೆ ಆಗಮಿಸಿ ತಮ್ಮ ಹರಕೆಯನ್ನು ಸಲ್ಲಿಸಿದರು.ಕೊಳೂರು ದೈವದಮನೆ ಫ್ರೆಂಡ್ಸ್ ಸಹಯೋಗದೊಂದಿಗೆ ನಾಟಕ ಪ್ರದರ್ಶನ ಜರುಗಿತು.ಅಶೋಕ ಶೆಟ್ಟಿ ಹೊಸೂರು […]

You cannot copy content of this page