ಸೇನಾಪುರ:ಎಕ್ಸ್ಪ್ರೆಸ್ ರೈಲು ನಿಲುಗಡೆಗೆ ಆಗ್ರಹಿಸಿ ಪ್ರತಿಭಟನೆ
ಕುಂದಾಪುರ:ದಿನದಿಂದ ದಿನಕ್ಕೆ ರೈಲು ಪ್ರಯಾಣ ಎನ್ನುವುದು ಜನರಿಗೆ ಬಹಳಷ್ಟು ಅಗತ್ಯವಾಗಿರುವ ಮೂಲ ಸೌಕರ್ಯಗಳಲ್ಲಿ ಒಂದಾಗಿದೆ.ಕರಾವಳಿ ಭಾಗದ ಜನರ ಜೀವನದ ಕೊಂಡಿ ಆಗಿರುವ ಕೊಂಕಣ ರೈಲು ಸೇವೆ ಎನ್ನುವುದು ಸ್ಥಳೀಯ ಜನರಿಗೆ ಮರಿಚಿಕೆ ಆಗಿದ್ದು ಸೇನಾಪುರ ರೈಲು ನಿಲ್ದಾಣದಲ್ಲಿ ಮುಂಬಯಿ ಮತ್ತು ಬೆಂಗಳೂರು ಎಕ್ಸ್ಪ್ರೆಸ್ ರೈಲು ನಿಲುಗಡೆ ಮಾಡಲು ಸಂಸದರ ಜತೆ ಸೇರಿ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.ಕೊಂಕಣ ರೈಲ್ವೆ ಹೋರಾಟ ಸಮಿತಿ ಸೇನಾಪುರ ವತಿಯಿಂದ ಭಾನುವಾರ ಸೇನಾಪುರ […]



























































































































































































































































































































































































































































































































































































































































































































































































































































































































































































































































































































































































































































































































































































































































































